ಕಾವೇರಿ ನದಿ ನೀರು ವಿಚಾರದಲ್ಲಿ ಬಿಜೆಪಿಯವರು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಜೆಪಿಯವರಿಗೆ ವೋಟುಗಳಿಲ್ಲ. ಹೀಗಾಗಿ ಕಾವೇರಿ ವಿಚಾರದಲ್ಲಿ ಬಿಜೆಪಿಯವರಿಗೆ ಆಸಕ್ತಿ ಇಲ್ಲ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಆದರೂ ಸಹ ಬಿಜೆಪಿಯವರೂ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಯೋಗ ಕರೆದೊಯ್ಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಮತ್ತೆ ರಾಜ್ಯಕ್ಕೆ ಹಿನ್ನೆಡೆಯುಂಟಾಗಿದ್ದು, ರಾಜ್ಯದ ಜನತೆ ತಾಳ್ಮೆಯಿಂದಿರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದ ಹಿತಾಸಕ್ತಿ ಕಾಯಲು ಸಿದ್ಧವಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ