Select Your Language

Notifications

webdunia
webdunia
webdunia
webdunia

ಮತ್ತೆ ಕ್ಯಾತೆ ತೆಗೆದ ತಮಿಳುನಾಡು ಸರಕಾರ

ಮತ್ತೆ ಕ್ಯಾತೆ ತೆಗೆದ ತಮಿಳುನಾಡು ಸರಕಾರ
ಬೆಂಗಳೂರು , ಸೋಮವಾರ, 26 ಸೆಪ್ಟಂಬರ್ 2016 (14:29 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ ಅರ್ಜಿ ವಿಚಾರಣೆ ಕೈಗೊಳ್ಳದಂತೆ ತಮಿಳುನಾಡು ಸರಕಾರ ಸುಪ್ರೀಂಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದೆ.
 
ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವವರೆಗೂ ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸದಂತೆ ತಮಿಳುನಾಡು ಸರಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೆಪ್ಟೆಂಬರ್ 20 ರಂದು ನೀಡಿರುವ ಆದೇಶ ಮಾರ್ಪಾಡು ಕೋರಿ ರಾಜ್ಯ ಸರಕಾರ ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
 
ಸೆಪ್ಟೆಂಬರ್ 20 ರಂದು ನಡೆದ ವಿಚಾರಣೆಯಲ್ಲಿ ಸೆಪ್ಟೆಂಬರ್ 28ರವರೆಗೂ ಪ್ರತಿ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿತ್ತು. ಆದರೆ, ರಾಜ್ಯ ಸರಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಕಾವೇರಿ ಜಲಾಶಗಳಲ್ಲಿ ನೀರಿಲ್ಲವಾದ್ದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ನಿರ್ಧಾರ ತೆಗೆದುಕೊಂಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ಬಿಜೆಪಿ ಸರಕಾರ ರಚನೆ: ಅಮಿತ್ ಶಾರದ್ದು ಹಗಲುಗನಸು ಎಂದ ಕಾಂಗ್ರೆಸ್