Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಕೇಂದ್ರದ ಮಧ್ಯಸ್ಥಿಕೆಯಲ್ಲಿ ಉಭಯ ರಾಜ್ಯಗಳ ಸಭೆ

ಕಾವೇರಿ ವಿವಾದ
ನವದೆಹಲಿ , ಮಂಗಳವಾರ, 27 ಸೆಪ್ಟಂಬರ್ 2016 (15:43 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಹಾಗೂ ನಾಡಿದ್ದು ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳ ಸಮಾಲೋಚನೆ ನಡೆಯಲಿದೆ.
ಕೇಂದ್ರ ಸರಕಾರದ ಮಧ್ಯಸ್ಥಿಕೆಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಸಭೆ ನಡೆಯಲ್ಲಿದ್ದು, ಕೇಂದ್ರ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಶಶಿಶೇಖರ್ ಅವರ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. 
 
ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳ ಜೊತೆ ಎರಡು ದಿನಗಳ ಕಾಲ ಸಭೆ ನಡೆಸಿ, ಶುಕ್ರವಾರ ಮಧ್ಯಾಹ್ನ ಸುಪ್ರೀಂಕೋರ್ಟ್‌ಗೆ ಮಾಹಿತಿ ಸಲ್ಲಿಸಲಾಗುತ್ತದೆ. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ  ಉಭಯ ರಾಜ್ಯಗಳ ಅಧಿಕಾರಿಗಳ ಸಭೆ ನಡೆಸುವಂತೆ ಸುಪ್ರೀಂಕೋರ್ಟ್ ಇಂದು ಅಟಾರ್ನಿ ಜನರಲ್ ಅವರಿಗೆ ಸೂಚನೆ ನೀಡಿತ್ತು. 
 
ಉಭಯ ರಾಜ್ಯಗಳ ಅಧಿಕಾರಿಗಳು ಪರಸ್ಪರ ಚರ್ಚಿಸಿ ಒಂದು ನಿರ್ಣಯಕ್ಕೆ ಬನ್ನಿ, ಶುಕ್ರವಾರ ಮಧ್ಯಾಹ್ನ ಮತ್ತೆ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕಕ್ಕೆ ಮತ್ತೆ ಆಘಾತ: ಎರಡು ದಿನಗಳ ಕಾಲ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ