ಕಾವೇರಿ ಸಮಸ್ಯೆಗೆ ಸರ್ಕಾರದ ಬೇಜವಾಬ್ದಾರಿ ಕಾರಣ

Webdunia
ಬುಧವಾರ, 27 ಸೆಪ್ಟಂಬರ್ 2023 (20:31 IST)
ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾವೇರಿ ಸಮಸ್ಯೆ ಉದ್ಭವವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಯಕರು ಅವರವರ ಹೊಡೆದಾಟದಲ್ಲಿ ಮುಳುಗಿರಬೇಕು. ತಮಿಳುನಾಡನ್ನು ಓಲೈಸಿಕೊಳ್ಳಲು ಮುಂದಾಗಿರಬೇಕು, ಸರಿಯಾಗಿ ಕಾವೇರಿ ಕೊಳ್ಳದ ಸಮಸ್ಯೆ ಅಧ್ಯಯನ ಮಾಡದೇ ಇರಬಹುದು. ಈ ಕಾರಣದಿಂದಲೇ ಸರ್ಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ. ನ್ಯಾಯಾಲಯಕ್ಕೆ ಅಂಕಿ ಅಂಶ ನೀಡಿಲ್ಲ. ಇದರ ಬದಲು ಪ್ರಧಾನಿಯನ್ನು ದೂರುವ ಕೆಲಸ ಮಾಡುತ್ತಿದ್ದಾರೆ ಎಂದು ಖಂಡಿಸಿದರು. ನಾನು ಸಿಎಂ, ಡಿಸಿಎಂ ದೆಹಲಿಗೆ ಬಂದಾಗಲೂ ಇದನ್ನೇ ಕೇಳಿದ್ದೆ. ಯಾಕೆ ನೀವು ಸರಿಯಾದ ಮಾಹಿತಿಯನ್ನು ನ್ಯಾಯಾಲಯ ಹಾಗೂ ಪ್ರಾಧಿಕಾರಕ್ಕೆ‌ ಕೊಟ್ಟಿಲ್ಲ ಎಂದು ಕೇಳಿದ್ದೆ. ದೆಹಲಿಯಿಂದ ತಮಿಳುನಾಡು, ಕರ್ನಾಟಕಕ್ಕೆ ನಿಯೋಗ ಕಳುಹಿಸಿಲು ನಾವು ಮನವಿ ಮಾಡಿದ್ದೇವೆ. ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ಮನವಿ ಮಾಡಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments