Webdunia - Bharat's app for daily news and videos

Install App

ಜೀವನದಿ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

Webdunia
ಮಂಗಳವಾರ, 17 ಅಕ್ಟೋಬರ್ 2017 (18:47 IST)
ಮಡಿಕೇರಿ: ಕನ್ನಡ ನಾಡಿನ ಜೀವನದಿ ತಲಕಾವೇರಿಯಲ್ಲಿ ಇಂದು  12.33ಕ್ಕೆ ಪವಿತ್ರ ತೀರ್ಥೋದ್ಭವವಾಯಿತು. ರಾಜ್ಯದ ನಾನಾ ಭಾಗದಿಂದ ಬಂದ ಜನ ಈ ಸಂಭ್ರಕ್ಕೆ ಸಾಕ್ಷಿಯಾದರು.

ಈ ಬಾರಿ ಮಧ್ಯಾಹ್ನದ ವೇಳೆಯೇ ತೀರ್ಥೋದ್ಭವವಾದ್ದರಿಂದ ಅನೇಕ ಯಾತ್ರಾರ್ಥಿಗಳು ಬೆಳಗ್ಗೆಯೇ ತಲಕಾವೇರಿಗೆ ಆಗಮಿಸಿದರು. ತಲಕಾವೇರಿಯಿಂದ 10 ಕಿ.ಮೀ. ದೂರದಲ್ಲಿರುವ ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರಗಳಲ್ಲಿ ಭಕ್ತರು ಪಿಂಡ ಪ್ರಧಾನ ಮತ್ತು ತಲೆ ಮುಡಿ ಹರಕೆ ಸಲ್ಲಿಸಿ ಪುಣ್ಯಸ್ನಾನ ಮಾಡಿದರು.

ರಾಜ್ಯ ಮಾತ್ರವಲ್ಲದೆ ಆಂಧ್ರ, ಕೇರಳ, ತಮಿಳುನಾಡು ರಾಜ್ಯಗಳಿಂದ ಅನೇಕ ಭಕ್ತರು ಆಗಮಿಸಿ, ತೀರ್ಥರೂಪಿ ಕಾವೇರಿಯ ಪುಣ್ಯಸ್ನಾನ ಮಾಡಿದರು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಎಸ್ಪಿ ರಾಜೇಂದ್ರ ಪ್ರಸಾದ್‌ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌, ಎಂಎಲ್‌ಸಿ ವೀಣಾ ಅಚ್ಚಯ್ಯ, ಮಂಡ್ಯ ಶಾಸಕ ಶ್ರೀಕಂಠೇಗೌಡ, ಅಪ್ಪಾಜಿಗೌಡ ಸೇರಿ ಹಲವರು ತೀರ್ಥೋದ್ಭವ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments