Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ಹರಿದ ಕಾವೇರಿ: ರೈತರಲ್ಲಿ ಭುಗಿಲೆದ್ದ ಆಕ್ರೋಶ

ತಮಿಳುನಾಡಿಗೆ ಹರಿದ ಕಾವೇರಿ: ರೈತರಲ್ಲಿ ಭುಗಿಲೆದ್ದ ಆಕ್ರೋಶ
ಮೈಸೂರು , ಶುಕ್ರವಾರ, 30 ಜೂನ್ 2017 (13:20 IST)
ಕಬಿನಿ-ಕೆಆರ್‌ಎಸ್ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿದು ಬಿಡುತ್ತಿರುವುದರಿಂದ ಕಾವೇರಿ ಕೊಳ್ಳದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಜಲಾಶಯ ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ನೀರು ಹರಿವು ಬಿಟ್ಟಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ.
 
ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಆರಂಭಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಅಸ್ಥವ್ಯಸ್ಥೆ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
 
ತಮಿಳುನಾಡಿಗೆ ರಾತೋರಾತ್ರಿ ಕಾವೇರಿ ನೀರು ಹರಿಸಿರುವುದು ಸರಿಯಲ್ಲ. ಕಾವೇರಿ ಕಣಿವೆಯ ಜನತೆಗೆ ಆಕ್ರೋಶ ಮೂಡಿಸಿದೆ ಎಂದು ರೈತ ಮುಖಂಡ ಮಾದೇಗೌಡರು ತಿಳಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಾರಾಣಸಿ: 65ರ ಫ್ರೆಂಚ್ ಮಹಿಳೆ ಮೇಲೆ ವಾಚ್ ಮೆನ್ ನಿಂದಲೇ ಅತ್ಯಾಚಾರ