Webdunia - Bharat's app for daily news and videos

Install App

ಡಿಕೆ ಶಿವಕುಮಾರ್‌ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ, ಪ್ರಕರಣದ ಮಾಹಿತಿ ಇಲ್ಲಿದೆ

Sampriya
ಸೋಮವಾರ, 21 ಅಕ್ಟೋಬರ್ 2024 (16:51 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಸರ್ಕಾರ ಸಿಬಿಐ ತನಿಖೆ ನೀಡಿದ್ದ ಆದೇಶವನ್ನು ಹಿಂಪಡೆದಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಬಿಜೆಪಿ ಶಾಸಕ ಯತ್ನಾಳ್‌ ಅರ್ಜಿ ವಿಚಾರಣೆ ವೇಳೆ ಈ ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಕೋರ್ಟ್ ಸಿಬಿಐ ಅಭಿಪ್ರಾಯ ಕೇಳಿತ್ತು. ಕೋರ್ಟ್ ಅಭಿಪ್ರಾಯ ಕೇಳಿದ್ದ ಹಿನ್ನೆಲೆಯಲ್ಲಿ ಸಿಬಿಐನಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು.

ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದ್ದರು.

ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

ಮುಂದಿನ ಸುದ್ದಿ
Show comments