Janardhan Reddy: ಶಿಕ್ಷೆ ಕಡಿಮೆ ಮಾಡಿ ಎಂದು ಅಂಗಲಾಚಿದ ಜನಾರ್ಧನ ರೆಡ್ಡಿಗೆ ಕೋರ್ಟ್ ಹೇಳಿದ್ದೇನು: ಇನ್ನು ಜೈಲೂಟ ಫಿಕ್ಸ್

Krishnaveni K
ಮಂಗಳವಾರ, 6 ಮೇ 2025 (17:17 IST)
ಬಳ್ಳಾರಿ: ಗಣಿ ದಣಿ, ಶಾಸಕ ಜನಾರ್ಧನ ರೆಡ್ಡಿ ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ಕಡಿಮೆ ಮಾಡಿ ಎಂದು ಅಂಗಲಾಚಿದ ಜನಾರ್ಧನ ರೆಡ್ಡಿಗೆ ಕೋರ್ಟ್ ಹೇಳಿದ್ದೇನು ಗೊತ್ತಾ?

ಒಬ್ಬ ಶಾಸಕನಿಗೆ 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಘೋಷಣೆಯಾದರೆ ಆತನ ಶಾಸಕ ಸ್ಥಾನವೂ ಕಳೆದುಕೊಳ್ಳಬೇಕಾಗುತ್ತದೆ. ಇದೀಗ ಜನಾರ್ಧನ ರೆಡ್ಡಿ ಪ್ರಕರಣದಲ್ಲೂ ಇದೇ ಆಗಿದೆ. ಸಿಬಿಐ ಕೋರ್ಟ್ ತೀರ್ಪಿನಿಂದ ರೆಡ್ಡಿ ಶಾಸಕ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ. ಜೊತೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಇದೇ ಕಾರಣಕ್ಕೆ ಅವರು ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಎಂದು ಕೋರ್ಟ್ ಬಳಿ ಅಂಗಲಾಚಿದ್ದಾರೆ. ಆದರೆ ಇದನ್ನು ಕೋರ್ಟ್ ನಿರಾಕರಿಸಿದ್ದು ನೀವು ಮಾಡಿರುವ ಹಗರಣಕ್ಕೆ ನಿಮಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.

ಓಬಳಾಪುರ ಅಕ್ರಮ ಗಣಿಕಾರಿಕೆ ಪ್ರಕರಣದಲ್ಲಿ ರೆಡ್ಡಿ 884 ಕೋಟಿ ರೂ. ಅಕ್ರಮವೆಸಗಿರುವುದು ಸಾಬೀತಾಗಿರುವ ಹಿನ್ನಲೆಯಲ್ಲಿ ಸಿಬಿಐ ಕೋರ್ಟ್ ಈ ತೀರ್ಪು ನೀಡಿದೆ. ಹಾಗಿದ್ದರೂ ಒಂದು ತಿಂಗಳೊಳಗಾಗಿ ಜನಾರ್ಧನ ರೆಡ್ಡಿ ಹೈಕೋರ್ಟ್ ಗೆ ಮನವಿ ಸಲ್ಲಿಸಬಹುದು. ಹೈಕೋರ್ಟ್ ತಡೆ ಒಡ್ಡಿದರೆ ಮಾತ್ರ ರೆಡ್ಡಿಗೆ ರಿಲೀಫ್ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments