Webdunia - Bharat's app for daily news and videos

Install App

ಸಿಬಿಐನಿಂದ ಜಾರ್ಜ್ ವಿರುದ್ಧ ಎಫ್‌ಐಆರ್: ಮೂವರು ಸಚಿವರೊಂದಿಗೆ ಸಿಎಂ ಚರ್ಚೆ

Webdunia
ಗುರುವಾರ, 26 ಅಕ್ಟೋಬರ್ 2017 (20:52 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಮೂವರು ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಸೌಧದಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಸಿ.ಮಹಾದೇವಪ್ಪ ಮತ್ತು ಕೆ.ಜೆ.ಜಾರ್ಜ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
 
ಸಿಬಿಐ ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರಿಂದ ವಿಪಕ್ಷಗಳು ಜಾರ್ಜ್ ರಾಜೀನಾಮೆಗೆ ಒತ್ತಾಯ ಹೇರುವುದು ಖಚಿತ. ಇಲ್ಲವೇ ಪ್ರತಿಭಟನೆಗೆ ಮುಂದಾದಲ್ಲಿ ಅದನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎನ್ನುವ ಬಗ್ಗೆ  ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
 
ವಿಪಕ್ಷಗಳಿಗೆ ಟಾಂಗ್ ನೀಡಲು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ಕೂಡಾ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments