Publish Date: Tue, 05 Dec 2023 (14:22 IST)
Updated Date: Tue, 05 Dec 2023 (14:36 IST)
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಮತ್ತೆ ನೊಟೀಸ್ ನೀಡಲು ಕೇಂದ್ರೀಯ ತನಿಖಾ ದಳ ಸಿದ್ದತೆ ನಡೆಸಿದೆ.. ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಕೇವಲ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುವ ಬಗ್ಗೆಯಷ್ಟೇ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿತ್ತು.
ಮೇಲ್ಮನವಿ ಹಿಂಪಡೆಯುವ ವಿಚಾರವನ್ನು ಹೊರತು ಪಡಿಸಿ ಉಳಿದ ಯಾವ ಅಂಶವನ್ನು ಪರಿಗಣಿಸಿಲ್ಲ ಹಾಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಮುಂದುವರಿಸಲು ಅವಕಾಶವಿದೆ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ.