Webdunia - Bharat's app for daily news and videos

Install App

ಆರ್.ಎಲ್.ಜಾಲಪ್ಪ ಮೇಲೆ ಸಿಬಿಐನಿಂದ ಎಫ್ಐಆರ್ ದಾಖಲು

Webdunia
ಗುರುವಾರ, 19 ಅಕ್ಟೋಬರ್ 2017 (11:32 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್‍ಗೆ ಮತ್ತೊಂದು ಬಿಗ್ ಶಾಕ್ ಸಿಕ್ಕಿದೆ. ಭ್ರಷ್ಟಾಚಾರದ ಆರೋಪದ ಮೇಲೆ ಕಾಂಗ್ರೆಸ್‍ನ ಪ್ರಭಾವಿ ಮುಖಂಡ ಆರ್.ಎಲ್.ಜಾಲಪ್ಪ ಮೇಲೆ ಸಿಬಿಐ ಎಫ್‍ಐಆರ್ ದಾಖಲು ಮಾಡಿದೆ. ದಲಿತರು, ಹಿಂದುಳಿದವರ ಹೆಸರಲ್ಲಿ ಜಾಲಪ್ಪ ಭಾರೀ ಭ್ರಷ್ಟಾಚಾರ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಮೆಡಿಕಲ್ ಕಾಲೇಜು ಸೀಟು ಹಗರಣದಲ್ಲಿ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗಳ ಮಾಲೀಕ ಆಗಿರುವ ಆರ್.ಎಲ್.ಜಾಲಪ್ಪ ಸೇರಿದಂತೆ ಆಂಧ್ರದ ನಾಲ್ವರು ಪ್ರಭಾವಿಗಳ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ. ದೇವರಾಜು ಅರಸು ಮೆಡಿಕಲ್ ಕಾಲೇಜು, ಎಜುಕೇಷನ್ ಅಂಡ್ ರೀಸರ್ಚ್ ಸಂಸ್ಥೆಯಲ್ಲಿ ಗೋಲ್‍ಮಾಲ್ ನಡೆದಿದ್ದು, ಶಿಕ್ಷಣ ಸಂಸ್ಥೆಯಲ್ಲಿ ಅನಧಿಕೃತವಾಗಿ ಮೆಡಿಕಲ್ ಕೋರ್ಸ್ ತೆರೆದ ಗಂಭೀರ ಆರೋಪ ಕೇಳಿಬಂದಿದೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಮೆಡಿಕಲ್ ಕೋರ್ಸ್ ತೆಗೆದು ಹಿಂದುಳಿದವರ ಹೆಸರಲ್ಲಿ ಹೆಚ್ಚು ಸೀಟು ಸೃಷ್ಟಿಸಿ ಹಣ ಲೂಟಿ ಮಾಡಿದ್ದಾರೆ ಎನ್ನಲಾಗಿದೆ. ಮೆಡಿಕಲ್ ವಿದ್ಯಾರ್ಥಿಗಳ ಹೆಸರಲ್ಲಿ ಜಾಲಪ್ಪ ಶಿಕ್ಷಣ ಸಂಸ್ಥೆ ಲೂಟಿ ಮಾಡಿದ್ದು, ಈ ಬಗ್ಗೆ ಆಂಧ್ರ ಎಸಿಬಿಯಿಂದ ದಾಖಲಾದ ದೂರಿನ ಮೇಲೆ ಸಿಬಿಐನಿಂದಲೂ ಎಫ್‍ಐಆರ್ ದಾಖಲಾಗಿದೆ. ಕಾನೂನು ಬಾಹಿರವಾಗಿ ಎಂಬಿಬಿಎಸ್, ಎಂಎಸ್, ಎಂಡಿ ಕೋರ್ಸ್‍ಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಜಾಲಪ್ಪ ಶಿಕ್ಷಣ ಸಂಸ್ಥೆಯಿಂದ ಭಾರೀ ಲಂಚ ಪಡೆದ ಆರೋಪದಲ್ಲಿ ಆರ್‍.ಎಲ್.ಜಾಲಪ್ಪ ಜತೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ ನಾಲ್ವರ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments