Select Your Language

Notifications

webdunia
webdunia
webdunia
webdunia

ಗಣಪತಿ ಕೇಸ್ ಸಿಬಿಐಗೆ: ಸುಪ್ರೀಂಕೋರ್ಟ್ ಆದೇಶ ಪರಿಶೀಲಿಸಿ ಪ್ರತಿಕ್ರಿಯೆ ಎಂದ ಸಿಎಂ

ಗಣಪತಿ ಕೇಸ್ ಸಿಬಿಐಗೆ: ಸುಪ್ರೀಂಕೋರ್ಟ್ ಆದೇಶ ಪರಿಶೀಲಿಸಿ ಪ್ರತಿಕ್ರಿಯೆ ಎಂದ ಸಿಎಂ
ಬೆಂಗಳೂರು , ಮಂಗಳವಾರ, 5 ಸೆಪ್ಟಂಬರ್ 2017 (16:52 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿರುವುದು ತಿಳಿದಿದೆ. ಆದರೆ, ಇನ್ನೂ ಆದೇಶ ಪ್ರತಿ ಕೈಸೇರಿಲ್ಲ. ಆದೇಶ ಪ್ರತಿ ಬಂದ ನಂತರ ಪ್ರತಿಕ್ರಿಯೆ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಐಡಿ ಸಲ್ಲಿಸಿರುವ ಬಿ ರಿಪೋರ್ಟ್ ರದ್ದಾಗಿದೆಯಾ? ಅಥವಾ ಮರುತನಿಖೆಗೆ ಆದೇಶಿಸಲಾಗಿದೆಯಾ? ಎನ್ನುವ ಬಗ್ಗೆ ಆದೇಶದ ಪ್ರತಿ ಬಂದ ನಂತರ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.
 
ಸುಪ್ರೀಂಕೋರ್ಟ್ ಆದೇಶದ ಪ್ರತಿಯನ್ನೇ ನೋಡದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಚಿವ ಜಾರ್ಜ್ ರಾಜೀನಾಮೆ ಕೇಳುವುದು ಸರಿಯಲ್ಲ ಎಂದರು.
 
ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ಇಲಾಖೆ ತನಿಖೆ ನಡೆಸಿ ಸಚಿವ ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದೆ. ತನಿಖೆ ಮುಗಿಯುವವರೆಗೂ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಜಾರ್ಜ್ ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ ಎನ್ನುವುದು ನನ್ನ ವೈಯಕ್ತಿಕ ಅನಿಸಿಕೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ಕೇಳಿದ್ರೆ ರಾಜೀನಾಮೆ ಕೊಡೋಕ್ಕಾಗಲ್ಲ: ಜಾರ್ಜ್