Webdunia - Bharat's app for daily news and videos

Install App

ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ದಾಳಿ

Webdunia
ಶುಕ್ರವಾರ, 27 ಜನವರಿ 2023 (19:15 IST)
ರಾಜ್ಯ, ಹೊರರಾಜ್ಯದ ವಿವಿಧ ಯೂನಿವರ್ಸಿಟಿಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಐದು ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ರಾಜಾಜಿ ನಗರದ ಕ್ವೆಸ್ಟ್ ಟೆಕ್ನಾಲಜೀಸ್, ಜೆ.ಪಿ.ನಗರದ ಸಿಸ್ಟಂ ಕ್ವೆಸ್ಟ್, ಭದ್ರಪ್ಪ ಲೇಔಟಿನ ಆರೋಹಿ ಇನ್ಸ್ಟಿಟ್ಯೂಟ್, ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜ್ ಹಾಗೂ ವಿಜಯನಗರದ ಬೆನಕಾ ಕರೆಸ್ಪಾಡೆನ್ಸ್ ಕಾಲೇಜ್‌ ಮೇಲೆ ದಾಳಿ ನಡೆಸಲಾಗಿದ್ದು ವಿಕಾಸ್ ಭಾಗವತ್ ಎಂಬಾತನನ್ನ ಬಂಧಿಸಲಾಗಿದೆ.
ಈ ಹಿಂದೆ ನಕಲಿ ಅಂಕಪಟ್ಟಿ ಜಾಲದ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಆರೋಪಿಗಳ ಮಾಹಿತಿಯನ್ವಯ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಅದರನ್ವಯ ಐದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ಸಂದರ್ಭದಲ್ಲಿ ಆರೋಪಿತ ಸಂಸ್ಥೆಗಳ ಬಳಿ ಅಣ್ಣಾಮಲೈ ಯೂನಿವರ್ಸಿಟಿ, ಸಿಕ್ಕಿಂ ಯೂನಿವರ್ಸಿಟಿ, ಗೀತಂ ಯೂನಿವರ್ಸಿಟಿ, ಕುವೆಂಪು ಯೂನಿವರ್ಸಿಟಿ, ಜೈನ್ ವಿಹಾರ್ ಯೂನಿವರ್ಸಿಟಿ, ಮಂಗಳೂರು ಯೂನಿವರ್ಸಿಟಿ, ಬೆಂಗಳೂರು ಯೂನಿವರ್ಸಿಟಿ ಸೇರಿದಂತೆ ಹದಿನೈದು ವಿವಿಧ ಯೂನಿವರ್ಸಿಟಿಗಳ 6846 ನಕಲಿ ಅಂಕಪಟ್ಟಿಗಳು ಪತ್ತೆಯಾಗಿವೆ. ಆಯಾ ಯೂನಿವರ್ಸಿಟಿಗಳಿಗೆ ಅಂಕಪಟ್ಟಿಗಳನ್ನ ಕಳುಹಿಸಿ ಅವುಗಳು ನಕಲಿ ಎಂಬ ಮಾಹಿತಿ ಪಡೆದಿರುವ ಸಿಸಿಬಿ ಪೊಲೀಸರು, ಆರೋಪಿ ಸಂಸ್ಥೆಗಳ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ.
 
ಯಾರಿಗೂ ನೀಡದೇ ಹಳೆಯ ವರ್ಷಗಳ ಅಂಕಪಟ್ಟಿಗಳೂ ಸಹ ಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ನಕಲಿ ಅಂಕಪಟ್ಟಿಗಳನ್ನ ಬಳಸಿ ಕೆಲವರು ಹುದ್ದೆ, ಮುಂಬಡ್ತಿ ಸಹ ಪಡೆದಿರಬಹುದಾದ ಸಾಧ್ಯತೆಯಿದ್ದು ತನಿಖೆ ನಡೆಸಲಾಗುತ್ತಿದೆ. ಇಂಥಹ ಯಾವುದೇ ಶಿಕ್ಷಣ ಸಂಸ್ಥೆಗಳ ಕುರಿತು ಮಾಹಿತಿಯಿದ್ದರೆ ತಿಳಿಸುವಂತೆ ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.ಸದ್ಯ ಆರೋಪಿತ ಸಂಸ್ಥೆಗಳ ಬಳಿಯಿದ್ದ 22 ಲ್ಯಾಪ್‌ಟಾಪ್‌ಗಳು, 1 ಪ್ರಿಂಟರ್, 13 ಮೊಬೈಲ್ ಫೋನ್‌ಗಳನ್ನ ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಡಾ ದೇವಿ ಪ್ರಸಾದ್ ಶೆಟ್ಟಿ ಪ್ರಕಾರ ಇದ್ದಕ್ಕಿದ್ದಂತೆ ಸಸ್ಯಾಹಾರಿಯಾದರೆ ಏನಾಗುತ್ತದೆ

ವರಮಹಾಲಕ್ಷ್ಮಿ ಹಬ್ಬಕ್ಕೆ ಏನೆಲ್ಲಾ ನೈವೇದ್ಯ ಮಾಡಬೇಕು ಮತ್ತು ಯಾಕೆ

ನಿಮ್ಮನ್ನು ಇನ್ಯಾರು ಪ್ರಶ್ನೆ ಮಾಡಬೇಕಿತ್ತು: ರಾಹುಲ್ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಟ್ರೋಲ್

ಮುಂದಿನ ಸುದ್ದಿ
Show comments