Webdunia - Bharat's app for daily news and videos

Install App

ಫಾರ್ಮ್ ಹೌಸ್ ಮೇಲೆ ಸಿಸಿಬಿ ಪೊಲೀಸರ ದಾಳಿ ಜೀವಂತ ವನ್ಯಜೀವಿಗಳು ಪತ್ತೆ

Webdunia
ಗುರುವಾರ, 22 ಡಿಸೆಂಬರ್ 2022 (14:07 IST)
ಎಸ್ ಎಸ್ ಮಲ್ಲಿಕಾರ್ಜುನ್ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ದಾಳಿ ವೇಳೆ ಫಾರ್ಮ್ ಹೌಸ್ ನಲ್ಲಿ ಕೆಲ ವನ್ಯಜೀವಿಗಳು ಪತ್ತೆಯಾಗಿದೆ.ಎಸ್‌.ಎಸ್‌.ಮಲ್ಲಿಕಾರ್ಜುನ್‌ ಒಡೆತನದ ಕಲ್ಲೇಶ್ವರ ಮಿಲ್‌ ಹಿಂಭಾಗದ ಫಾರ್ಮ್‌ ಹೌಸ್‌ ಮೇಲೆ ದಾಳಿ ನಡೆದಿದ್ದು,ಸಿಸಿಬಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು, ಕೆಲ ವನ್ಯಜೀವಿಗಳಾದ 7 ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, 7 ಕಾಡುಹಂದಿಗಳು, 3 ಮುಂಗುಸಿಗಳು, 2 ನರಿಗಳು ಪತ್ತೆ ಯಾಗಿದೆ.ಪ್ರಾಣಿಗಳನ್ನು ರಕ್ಷಿಸಿ ಸಿಸಿಬಿ ಪೊಲೀಸರು ಅರಣ್ಯ ಇಲಾಖೆಗೆ ಹಸ್ತಾಂತರಿಸಿದಾರೆ.
 
ಬೆಂಗಳೂರಿನ ಹೆಬ್ಬಾಳದಲ್ಲಿ ಸೆಂಥಿಲ್ ನನ್ನ ಪೊಲೀಸರು ಬಂಧಿಸಿದ್ದಾರೆ.ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡುತ್ತಿದ್ದಾಗ ಸೆಂಥಿಲ್‌ ನನ್ನ ಸಿಸಿಬಿ ಪೊಲೀಸರು ಬಂಧನ ಮಾಡಲಾಗಿದ್ದು,ಸೆಂಥಿಲ್‌ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.ತನಿಖೆ ವೇಳೆ ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಆರೋಪಿ ಬಾಯ್ಬಿಟ್ಟಿದ್ದ . ಸೇಂಥಿಲ್ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದಾರೆ.ಕಾರ್ಯಾಚರಣೆ ವೇಳೆ ಜೀವಂತ ವನ್ಯಪ್ರಾಣಿಗಳು ಸಿಕ್ಕಿರುವ ಮಾಹಿತಿ ಲಭಿಸಿದ್ದು,ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
 
ಮುಂದಿನ ಕ್ರಮಕ್ಕೆ ಪ್ರಕರಣವನ್ನು ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರಿಸಿದಾರೆ.ಸ್ಥಳೀಯ ಪೊಲೀಸರಿಗೆ ಸಿಸಿಬಿ ಪೊಲೀಸರು ಸೆಂಥಿಲ್‌ನನ್ನು ಹಸ್ತಾಂತರಿಸಿದಾರೆ.ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ.ಶೀಘ್ರವೇ ವಿಶೇಷ ತನಿಖಾಧಿಕಾರಿ ನೇಮಿಸಿ ಪ್ರಕರಣದ ತನಿಖೆ ಆರಂಭವಾಗಲಿದೆ.ಪರವಾನಗಿ ಪಡೆದೇ ವನ್ಯಜೀವಿಗಳನ್ನು ಸಾಕಿದ್ದೆವು ಎಂಬುದಾಗಿ ಎಸ್ ಎಸ್ ಮಲ್ಲಿಕಾರ್ಜುನ್ ಆಪ್ತರ ಮಾಹಿತಿ ಲಭಿಸಿದ್ದು,2000ರಿಂದಲೇ ನಮ್ಮ ಫಾರ್ಮ್‌ ಹೌಸ್‌ನಲ್ಲಿ ಜಿಂಕೆ ಸಾಕುತ್ತಿದ್ದೆವು.ಇವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕಾನೂನು ಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡಿದ್ದಾನೆ.ಪರವಾನಗಿ ಪಡೆದು ಸಾಕುತ್ತಿದ್ದ ನಾಲ್ಕೈದು ಜಿಂಕೆಗಳು ಮರಿ ಹಾಕಿದ್ದರಿಂದ ಇವುಗಳ ಸಂಖ್ಯೆ ಈಗ ಹೆಚ್ಚಾಗಿದೆ.ಇತ್ತಿಚೆಗೆ ಜನಿಸಿದ ಮರಿಗಳ ಸಾಕುವ ಪರವಾನಗಿ ಪಡೆಯಬೇಕಿದೆ.ಕಾನೂನು ಪ್ರಕಾರವೇ ನಾವು ಸಾಕುತ್ತಿದ್ದೇವೆ ಎಂದು ಎಸ್‌. ಮಲ್ಲಿಕಾರ್ಜುನ್‌ ಆಪ್ತರಿಂದ ಮಾಹಿತಿ ಲಭ್ಯವಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments