Webdunia - Bharat's app for daily news and videos

Install App

ಜನಾರ್ಧನ ರೆಡ್ಡಿಗಾಗಿ ಮುಂದುವರಿದ ಸಿಸಿಬಿ ಪೊಲೀಸರ ಶೋಧ

Webdunia
ಗುರುವಾರ, 8 ನವೆಂಬರ್ 2018 (09:11 IST)
ಬಳ್ಳಾರಿ: ಆಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಡೀಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಗಣಿ ದಣಿ ಜನಾರ್ಧನ ರೆಡ್ಡಿ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಇಂದೂ ಶೋಧ ಮುಂದುವರಿಸಿದ್ದಾರೆ.

ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಪೊಲೀಸರು ಅವರ ನಿವಾಸಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದೀಗ ಸಿರಗುಪ್ಪದ ನಿವಾಸದ ಮೇಲೆ 8 ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನ, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಈ ನಡುವೆ ದಾಳಿ ವೇಳೆ ಜನಾರ್ಧನ ರೆಡ್ಡಿ ಮಾವ ಪರಮೇಶ್ವರ್ ರೆಡ್ಡಿ ಆ ನಿವಾಸದಲ್ಲಿದ್ದರು ಎನ್ನಲಾಗಿದೆ. ಕೆಲ ಹೊತ್ತಿನ ಬಳಿಕ ಶಾಸಕ ಬಿ ಶ್ರೀರಾಮುಲು ಕೂಡಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿರುವ ಅವರ ನಿವಾಸಗಳು, ಸಂಬಂಧಿಕರ ನಿವಾಸಗಳಲ್ಲಿ ಸಿಸಿಬಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments