Select Your Language

Notifications

webdunia
webdunia
webdunia
webdunia

ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಎಚ್ಚರಿಕೆ

ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಎಚ್ಚರಿಕೆ
ಬೆಂಗಳೂರು , ಶನಿವಾರ, 10 ನವೆಂಬರ್ 2018 (09:36 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸಿಸಿಬಿ ಪೊಲೀಸರು ಡೆಡ್ ಲೈನ್ ನೀಡಿದ್ದಾರೆ.

ರೆಡ್ಡಿ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಇದುವರೆಗೆ ಬಂಧನ ಸಾಧ‍್ಯವಾಗಿಲ್ಲ. ಈ ನಡುವೆ ರೆಡ್ಡಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅದು ನ.12 ಕ್ಕೆ ಮುಂದೂಡಿಕೆಯಾಗಿದೆ.

ಇದೀಗ ಸಿಸಿಬಿ ಪೊಲೀಸರು ಶರಣಾಗತಿಯಾಗುವಂತೆ ಜನಾರ್ಧನ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ನ.11 ರೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಈ ನಡುವೆ ರೆಡ್ಡಿ ಒಡೆತನದ ಎಲ್ಲಾ ನಿವಾಸಗಳು, ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಒಬ್ಬ ದೇಶಪ್ರೇಮಿ ಅರಸ, ಬಿಜೆಪಿಯವರು ಕನ್ನಡ ಕಳಚಿಟ್ಟು ನೋಡಲಿ: ಸಿದ್ದರಾಮಯ್ಯ ಟಾಂಗ್