Webdunia - Bharat's app for daily news and videos

Install App

ಬಳ್ಳಾರಿ ಸೋಲಿನ ಬೆನ್ನಲ್ಲೇ ಜನಾರ್ಧನ ರೆಡ್ಡಿಗೆ ಹೊಸ ಸಂಕಟ

Webdunia
ಬುಧವಾರ, 7 ನವೆಂಬರ್ 2018 (09:40 IST)
ಬಳ್ಳಾರಿ: ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಸ್ನೇಹಿತ ಬಿ ಶ್ರೀರಾಮುಲು ಅಷ್ಟೆಲ್ಲಾ ಪ್ರಚಾರ ನಡೆಸಿಯೂ ತವರಿನಲ್ಲಿ ತಮ್ಮ ಪರ ಅಭ್ಯರ್ಥಿ ಸೋಲುಂಡ ಹತಾಶೆಯಲ್ಲಿರುವಾಗಲೇ ಗಣಿ  ದಣಿ ಜನಾರ್ಧನ ರೆಡ್ಡಿಗೆ ಹೊಸ ಸಂಕಟ ಎದುರಾಗಿದೆ.

ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಲ್ಲದೆ, ಕಳೆದ ವಿಧಾನಸಭೆ ಚುನಾವಣೆಗೆ ಸುಮಾರು 20 ಕೋಟಿ ರೂ. ಹಣವನ್ನು ಖರ್ಚು ಮಾಡಿದ್ದಾರೆಂಬ ಗಂಭೀರ ಆರೋಪಗಳ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದೀಗ ಜನಾರ್ಧನ ರೆಡ್ಡಿ ತಲೆಮರೆಸಿಕೊಂಡು ಅಲೋಕ್‍ ಕುಮಾರ್ ನೇತೃತ್ವದ ಸಿಸಿಬಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಇಡಿ ಪ್ರಕರಣದಿಂದ ಹೊರ ಬರಲು ಇಡಿ ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಡಲು ಮುಂದಾಗಿದ್ದಾರೆಂಬ ಗಂಭೀರ ಪ್ರಕರಣವೂ ಅವರ ವಿರುದ್ಧ ದಾಖಲಾಗಿದೆ.

ಚುನಾವಣೆಯ ಸಂದರ್ಭದಲ್ಲಿಯೇ ಜನಾರ್ಧನ ರೆಡ್ಡಿ ವಿರುದ್ಧ ಸಾಕ್ಷ್ಯ ಸಂಗ್ರಹಿಸಲಾಗಿತ್ತಾದರೂ, ಆ ಸಂದರ್ಭದಲ್ಲಿ ಬಂಧಿಸಿದರೆ ಇದಕ್ಕೆ ರಾಜಕೀಯ ಬಣ್ಣ ಬರಬಹುದು ಎಂಬ ಉದ್ದೇಶಕ್ಕೆ ಚುನಾವಣೆ ಫಲಿತಾಂಶದ ನಂತರ ಸಿಸಿಬಿ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ. ಜನಾರ್ಧನ ರೆಡ್ಡಿ ಜತೆಗೆ ಅವರ ಆಪ್ತ ಅಲಿಖಾನ್ ಬಂಧನಕ್ಕೂ ಪೊಲೀಸರು ಹೊಂಚು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments