Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಪ್ರಕರಣ: ಸಿಡಿ ಯುವತಿಯ ತಂದೆಯಿಂದ ಕಿಡ್ನ್ಯಾಪ್ ಕೇಸ್

Webdunia
ಬುಧವಾರ, 17 ಮಾರ್ಚ್ 2021 (09:49 IST)
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದ ಯುವತಿಯ ತಂದೆ ತನ್ನ ಮಗಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ದೂರು ನೀಡಿ ಕೇಸ್ ಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

 

ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ಯುವತಿಯ ಪೋಷಕರು ದೂರು ದಾಖಲಿಸಿದ್ದಾರೆ. ತಮ್ಮ ಮಗಳನ್ನು ಮಾರ್ಚ್ 2 ರಂದು ಅಪಹರಿಸಿ ಅಕ್ರಮವಾಗಿ ಬಂಧನದಲ್ಲಿಟ್ಟು, ನಕಲಿ ಸಿಡಿ ಮಾಡಿ ಮಾಧ‍್ಯಮಗಳಿಗೆ ಹರಿಯಬಿಟ್ಟು ಅವಮಾನ ಮಾಡಿದ್ದಾರೆ.

ಮಾಧ್ಯಮಗಳಲ್ಲಿ ವಿಡಿಯೋ ನೋಡಿ ಮಗಳಿಗೆ ಕರೆ ಮಾಡಿದಾಗ ವಿಡಿಯೋದಲ್ಲಿರುವುದು ನಾನಲ್ಲ. ಎಡಿಟ್ ಮಾಡಿ ನನ್ನ ಮುಖ, ಧ್ವನಿ ಸೇರಿಸಲಾಗಿದೆ. ಅದು ನಕಲಿ ಎಂದು ಗೊತ್ತಾದ ಬಳಿಕ ಊರಿಗೆ ಬರುತ್ತೇನೆ ಎಂದಿದ್ದಳು. ಕರೆ ಮಾಡಿದಾಗ ಭಯದಿಂದ ಮಾತನಾಡುತ್ತಿದ್ದಳು. ನಾನು ಎಲ್ಲಿದ್ದೇನೆಂದೇ ಗೊತ್ತಿಲ್ಲ ಎಂದಿದ್ದಳು. ಇದನ್ನು ನೋಡಿದರೆ ಯಾರೋ ಆಕೆಯನ್ನು ಅಪಹರಿಸಿ ಒತ್ತಾಯಪೂರ್ವಕವಾಗಿ ವಿಡಿಯೋ ಮಾಡಿ ಬಿಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments