ಬೆಂಗಳೂರಿನ ಎಎಪಿ ಕಾರ್ಯಕರ್ತರ ಸಂಭ್ರಮ

Webdunia
ಬುಧವಾರ, 7 ಡಿಸೆಂಬರ್ 2022 (20:19 IST)
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಗೆಲುವನ್ನು ಬೆಂಗಳೂರಿನ ಎಎಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕುಮಾರ ಪಾರ್ಕ್ ಪಶ್ಚಿಮದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸಿಹಿ ಹಂಚಿ, ನಂತರ ಅಲ್ಲಿಂದ ಬಿಬಿಎಂಪಿ ಕಚೇರಿಗೆ ಬೈಕ್ ರ್ಯಾ ಲಿ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, “ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಸಾಧನೆಗಳನ್ನು ಕಣ್ಣಾರೆ ಕಂಡಿದ್ದರಿಂದ ದೆಹಲಿಯ ಜನತೆ ಎಂಸಿಡಿ ಚುನಾವಣೆಯಲ್ಲಿ ಸಹಜವಾಗಿಯೇ ಎಎಪಿಯನ್ನು ಗೆಲ್ಲಿಸಿದ್ದಾರೆ. ನಗರ ಪ್ರದೇಶದ ಜನರು ಆಮ್ ಆದ್ಮಿ ಪಾರ್ಟಿಯತ್ತ ದೊಡ್ಡ ಪ್ರಮಾಣದಲ್ಲಿ ಆಕರ್ಷಿತರಾಗುತ್ತಿರುವುದು ಎಂಸಿಡಿ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದ್ದು, ಬಿಬಿಎಂಪಿ ಚುನಾವಣೆಯಲ್ಲೂ ಇದೇ ರೀತಿಯ ಫಲಿತಾಂಶ ಬರಲಿದೆ. ಬಹುಮತದೊಂದಿಗೆ ಆಮ್ ಆದ್ಮಿ ಪಾರ್ಟಿಯು ಬಿಬಿಎಂಪಿಯ ಅಧಿಕಾರದ ಗದ್ದುಗೆ ಏರಲಿದೆ. ಖಾಸಗಿ ಸಂಸ್ಥೆಗಳಿಂದ ಸಮೀಕ್ಷೆ ಮಾಡಿಸಿದ ಬಿಜೆಪಿ ನಾಯಕರಿಗೂ ಈ ವಿಚಾರ ಅರಿವಿಗೆ ಬಂದಿದೆ. ಆದ್ದರಿಂದಲೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ”ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments