Webdunia - Bharat's app for daily news and videos

Install App

ರಾಜ್ಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆ ಸಡಗರ

Webdunia
ಶುಕ್ರವಾರ, 13 ಜುಲೈ 2018 (16:23 IST)
ನಾಡಿನಾದ್ಯಂತ ಇಂದು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಸಡಗರದಿಂದ ನಡೆದಿದೆ. ಪಾರಂಪರಿಕವಾಗಿ ಈ ಹಬ್ಬದ ಆಚರಣೆ ಮಾಡುವುದು ವಾಡಿಕೆ. ಪ್ರತಿವರ್ಷ ಆಷಾಢ ಮಾಸದಲ್ಲಿ ಬರೋ ಮಣ್ಣೆತ್ತಿನ ಅಮಾವಾಸ್ಯೆ ಕೃಷಿಕರಿಗೆ ಸಂಭ್ರಮದ ಹಬ್ಬಗಳಲ್ಲೊಂದು. ಉತ್ತರ ಕರ್ನಾಟಕದಲ್ಲಿ ಅದ್ರಲ್ಲೂ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರತಿ ಹಳ್ಳಿಯಲ್ಲೂ ಮಣ್ಣೆತ್ತಿನ ಅಮಾವಾಸ್ಯೆಯನ್ನು ವಿಶಿಷ್ಟವಾಗಿ ಆಚರಿಸುತ್ತಾರೆ.

ಬೆಳಿಗ್ಗೆ ಕುಟುಂಬ- ಪರಿವಾರ ಸಮೇತ, ಹೊಸ ಬಟ್ಟೆಗಳನ್ನು ಧರಿಸಿದ ಜನರು ದೇವಸ್ಥಾನಗಳಿಗೆ ತೆರಳಿ ಮಣ್ಣೆತ್ತಿನ ಪೂಜೆ ಮಾಡಿದ್ರು. ಎತ್ತು ಕೃಷಿಕರಿಗೆ ಆರಾಧ್ಯ ದೈವ. ಪ್ರತಿ ವರ್ಷ ಮುಂಗಾರಿನಲ್ಲಿ ಬರೋ  ಅಮಾವಾಸ್ಯೆ ದಿನ ಎತ್ತುಗಳನ್ನು ಪೂಜೆ ಮಾಡುವುದರಿಂದ ಈಶ್ವರ ತೃಪ್ತನಾಗುತ್ತಾನೆ. ಮಳೆ-ಬೆಳೆ ಚೆನ್ನಾಗಿರುತ್ತದೆ.

ಬಿತ್ತನೆಗೆ ಮತ್ತು ಕೃಷಿಗೆ ಜೀವನಾಧಾರವಾಗಿರುವ ಎತ್ತುಗಳನ್ನು ಮಣ್ಣಿನಲ್ಲಿ ತಯಾರಿಸಿ ಪೂಜಿಸುವುದರಿಂದ ಕೃಷಿಕನ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ, ರಾಜ್ಯದಾದ್ಯಂತ ಕೃಷಿಕ ಕುಟುಂಬದವರು ಮಣ್ಣೆತ್ತಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ಸಲ್ಲಿಸಿದ್ರು. ಕೆಲವರು ತಮ್ಮ ತಮ್ಮ ಮನೆಗಳಲ್ಲಿ ಮಣ್ಣಿನ ಎತ್ತುಗಳಿಗೆ ಪೂಜೆ ಸಲ್ಲಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments