Webdunia - Bharat's app for daily news and videos

Install App

ರಾಜ್ಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆ ಸಡಗರ

Webdunia
ಶುಕ್ರವಾರ, 13 ಜುಲೈ 2018 (16:23 IST)
ನಾಡಿನಾದ್ಯಂತ ಇಂದು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಸಡಗರದಿಂದ ನಡೆದಿದೆ. ಪಾರಂಪರಿಕವಾಗಿ ಈ ಹಬ್ಬದ ಆಚರಣೆ ಮಾಡುವುದು ವಾಡಿಕೆ. ಪ್ರತಿವರ್ಷ ಆಷಾಢ ಮಾಸದಲ್ಲಿ ಬರೋ ಮಣ್ಣೆತ್ತಿನ ಅಮಾವಾಸ್ಯೆ ಕೃಷಿಕರಿಗೆ ಸಂಭ್ರಮದ ಹಬ್ಬಗಳಲ್ಲೊಂದು. ಉತ್ತರ ಕರ್ನಾಟಕದಲ್ಲಿ ಅದ್ರಲ್ಲೂ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರತಿ ಹಳ್ಳಿಯಲ್ಲೂ ಮಣ್ಣೆತ್ತಿನ ಅಮಾವಾಸ್ಯೆಯನ್ನು ವಿಶಿಷ್ಟವಾಗಿ ಆಚರಿಸುತ್ತಾರೆ.

ಬೆಳಿಗ್ಗೆ ಕುಟುಂಬ- ಪರಿವಾರ ಸಮೇತ, ಹೊಸ ಬಟ್ಟೆಗಳನ್ನು ಧರಿಸಿದ ಜನರು ದೇವಸ್ಥಾನಗಳಿಗೆ ತೆರಳಿ ಮಣ್ಣೆತ್ತಿನ ಪೂಜೆ ಮಾಡಿದ್ರು. ಎತ್ತು ಕೃಷಿಕರಿಗೆ ಆರಾಧ್ಯ ದೈವ. ಪ್ರತಿ ವರ್ಷ ಮುಂಗಾರಿನಲ್ಲಿ ಬರೋ  ಅಮಾವಾಸ್ಯೆ ದಿನ ಎತ್ತುಗಳನ್ನು ಪೂಜೆ ಮಾಡುವುದರಿಂದ ಈಶ್ವರ ತೃಪ್ತನಾಗುತ್ತಾನೆ. ಮಳೆ-ಬೆಳೆ ಚೆನ್ನಾಗಿರುತ್ತದೆ.

ಬಿತ್ತನೆಗೆ ಮತ್ತು ಕೃಷಿಗೆ ಜೀವನಾಧಾರವಾಗಿರುವ ಎತ್ತುಗಳನ್ನು ಮಣ್ಣಿನಲ್ಲಿ ತಯಾರಿಸಿ ಪೂಜಿಸುವುದರಿಂದ ಕೃಷಿಕನ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ, ರಾಜ್ಯದಾದ್ಯಂತ ಕೃಷಿಕ ಕುಟುಂಬದವರು ಮಣ್ಣೆತ್ತಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ಸಲ್ಲಿಸಿದ್ರು. ಕೆಲವರು ತಮ್ಮ ತಮ್ಮ ಮನೆಗಳಲ್ಲಿ ಮಣ್ಣಿನ ಎತ್ತುಗಳಿಗೆ ಪೂಜೆ ಸಲ್ಲಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments