Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿವಕುಮಾರ್ ಬಾಯಿಗೆ ಸೆಲ್ಲೋ ಟೇಪ್?

Webdunia
ಶನಿವಾರ, 22 ಜೂನ್ 2019 (16:02 IST)
ಮೈತ್ರಿ ಸರಕಾರದ ಬಗ್ಗೆ ಏನನ್ನೂ ಮಾತನಾಡಬಾರದೆಂದು ಹೇಳಿದ್ದರಿಂದ ಬಾಯಿಗೆ ಸೆಲ್ಲೋ ಟೇಪ್ ಹಾಕಿಕೊಂಡಿದ್ದೇನೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಧ್ಯಂತರ ಚುನಾವಣೆ ನಡೆಯಲಿದೆ ಎನ್ನುವ ಹೇಳಿಕೆಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕುಂದಗೋಳದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಡಿ ಕೆ ಶಿವಕುಮಾರ್, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ಸುಭದ್ರವಾಗಿರುತ್ತೆ ಅಂತ ನನಗೆ ನಂಬಿಕೆ ಇದೆ ಎಂದರು.

ನಾನು ಮಾತು ತಪ್ಪುವುದಿಲ್ಲ. ರಾಹುಲ್ ಗಾಂಧಿ ಅವರೂ ಮಾತು ತಪ್ಪುವುದಿಲ್ಲ ಎಂದರು.

ಮೈತ್ರಿ ಸರ್ಕಾರದ ಬಗ್ಗೆ ಏನನ್ನೂ ಮಾತಾಡಬಾರದೆಂದು ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಮಾಡಿದ್ದಾರೆ.

ಅವರು ಹೇಳಿದ ಮೇಲೆ ಬಾಯಿಗೆ ಸೆಲ್ಲೋ ಟೇಪ್ ಹಾಕೊಂಡಿದ್ದೇವೆ ಅಂತ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments