ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರದ ಮೇಲೆ ಆರೋಪ

geetha
ಸೋಮವಾರ, 5 ಫೆಬ್ರವರಿ 2024 (18:00 IST)
ಬೆಂಗಳೂರು : ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಬಿಜೆಪಿ, 2004-2014ರ ವರೆಗೆ ಯುಪಿಎ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್‌ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ ₹81,795 ಕೋಟಿ. ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ  ₹2,82,791 ಕೋಟಿ ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್‌ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ ಎಂದು ಹೇಳಿದೆ.

 
ಜೊತೆಗೆ, ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6750 ಕಿಲೋಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವ ಎಂದು ಬಿಜೆಪಿ ಲೇವಡಿ ಮಾಡಿದೆ.

ಬಜೆಟ್‌ ನಲ್ಲಿ ರಾಜ್ಯಕ್ಕೆ ನೀಡಿರುವ ಅನುದಾನದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ. ಸೋಮವಾರ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಸಂದೇಶ ಹಂಚಿಕೊಂಡಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಡಳಿತದ ದಯನೀಯ ವೈಫಲ್ಯ ಮರೆಮಾಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ದೂರಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments