Webdunia - Bharat's app for daily news and videos

Install App

ಆಂಧ್ರಕ್ಕೆ 15ಸಾವಿರ ಕೋಟಿ ನೀಡಿದ ಕೇಂದ್ರ, ಕರ್ನಾಟಕಕ್ಕೆ ನೀಡಿದ್ದು ಚೊಂಬು: ದಿನೇಶ್ ಗುಂಡೂರಾವ್

Sampriya
ಮಂಗಳವಾರ, 23 ಜುಲೈ 2024 (19:15 IST)
Photo Courtesy X
ಬೆಂಗಳೂರು: ಕೇಂದ್ರ ಹಣಕಾಸು ಸಚಿವರ ಬಜೆಟ್ ಭಾಷಣದಲ್ಲಿ 'ಕರ್ನಾಟಕ'ದ ಪ್ರಸ್ತಾಪವೇ ಇಲ್ಲ. ಬಜೆಟ್'ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು ಎಂಬುದಕ್ಕೆ ಇದೇ ಸಾಕ್ಷಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯಿಸಿದ್ದಾರೆ.

ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡು ಅಸಮಾಧಾನ ಹೊರಹಾಕಿದ್ದಾರೆ.

ಆಂಧ್ರಪ್ರದೇಶಕ್ಕೆ 15,000 ಕೋಟಿ, ಬಿಹಾರಕ್ಕೆ 26,000 ಕೋಟಿ ಪ್ಯಾಕೇಜ್. ಕರ್ನಾಟಕಕ್ಕೆ ಸಿಕ್ಕಿದ್ದು ಮಾತ್ರ 'ಚೊಂಬು'!

ರಾಜ್ಯಕ್ಕೆ ಯಾವ ಹೊಸ ಯೋಜನೆಗಳ ಪ್ರಸ್ತಾಪವೂ  ಇಲ್ಲ. ಹಳೆ ಯೋಜನೆಗಳಿಗೆ ಅನುದಾನವಿಲ್ಲ. ರಾಯಚೂರಿನಲ್ಲಿ ಸ್ಥಾಪನೆಯಾಗಬೇಕಿದ್ದ ಏಮ್ಸ್ ಮೆಡಿಕಲ್ ಕಾಲೇಜಿನ ಪ್ರಸ್ತಾಪವಿಲ್ಲ. ಒಟ್ಟಾರೆ ಕರ್ನಾಟಕದ ಬಗ್ಗೆ ಮಾತೇ ಇಲ್ಲ.

ಇನ್ನು ಉದ್ಯೋಗಿಗಳಿಗೆ ಆದಾಯ ತೆರಿಗೆ ವಿನಾಯಿತಿ ಇಲ್ಲ. ಬಡವರಿಗೆ ರೈತರಿಗೆ ಯಾವ ವಿಶೇಷ ಯೋಜನೆಗಳೂ ಇಲ್ಲ.

ಮೋದಿ ಸರ್ಕಾರದ ಬಜೆಟ್ ಎಂದಿನಂತೆ ಶ್ರೀಮಂತರ ಪರ ಹಾಗು ಬಡವರ, ತೆರಿಗೆ ಪಾವತಿದಾರರ ವಿರೋಧಿ ಬಜೆಟ್ ಆಗಿದೆ. ಸರ್ಕಾರವನ್ನು ಉಳಿಸಿಕೊಳ್ಳಲು ಮಿತ್ರಪಕ್ಷಗಳ ಓಲೈಕೆಗೆ ಸಾವಿರಾರು ಕೋಟಿ ಮೀಸಲಿಟ್ಟ ಬಜೆಟ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments