ಕರ್ನಾಟಕದ ಬಡ ವರ್ಗದ ಜನರಿಗೆ ಕೇಂದ್ರದಿಂದ ಸಂಕ್ರಾಂತಿ ಕೊಡುಗೆ

Webdunia
ಭಾನುವಾರ, 16 ಜನವರಿ 2022 (19:39 IST)
ಬೆಂಗಳೂರು: ಕೇಂದ್ರ ಸರಕಾರ ಕರ್ನಾಟಕದ ಬಡ ವರ್ಗದವರಿಗೆ ಮಕರ ಸಂಕ್ರಾಂತಿ ಕೊಡುಗೆಯನ್ನು ನೀಡಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ರಿಪ್ಲೈ ಟ್ವೀಟ್ ಮಾಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ, ‘ಪಿಎಂಎವೈ-ಜಿ ಅಡಿಯಲ್ಲಿ ಕರ್ನಾಟಕದ ಗ್ರಾಮೀಣ ಬಡ ವರ್ಗದ 18,78,671 ವಸತಿ ರಹಿತ ಹಾಗೂ 6,61,535 ನಿವೇಶನ ರಹಿತರ ಸಿಂಕ್ರೊನೈಸೇಶನ್‌ನ ಬಹುದಿನಗಳ ಬೇಡಿಕೆಯನ್ನು ಅನುಮೋದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಇದು ನಿಜವಾಗಿಯೂ ಆ ಎಲ್ಲ ಜನರ ಜೀವನದಲ್ಲಿ ಹೊಸ ಸಂತೋಷವನ್ನು ತರುವ ಜೊತೆಗೆ ಮಕರ ಸಂಕ್ರಾಂತಿಯನ್ನು ಇನ್ನಷ್ಟು ವಿಶೇಷವಾಗಿಸಿದೆ’ ಎಂದು ಹೇಳಿದ್ದಾರೆ.
ಇದಕ್ಕೆ ರಿಪ್ಲೈ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ‘ರಾಷ್ಟ್ರದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀರುತ್ತಿರುವ ಕರ್ನಾಟಕದ ನನ್ನ ಸಹೋದರರು ಮತ್ತು ಸಹೋದರಿಯರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು. ರಾಜ್ಯದ ಜನರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸದಾ ಶ್ರಮಿಸಲಿವೆ’ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments