Webdunia - Bharat's app for daily news and videos

Install App

ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ, ಡಿವಿಎಸ್‌ರದ್ದು ಸುಳ್ಳಿನ ಕಂತೆ: ಕಾಗೋಡು ತಿಮ್ಮಪ್ಪ

Webdunia
ಸೋಮವಾರ, 23 ಜನವರಿ 2017 (17:43 IST)
ಕೇಂದ್ರ ಸರಕಾರ ಬರ ಪರಿಹಾರದ ಹಣವನ್ನು ಕೊಟ್ಟಿದೆ ಅನ್ನೋದಕ್ಕಿಂತ ದೊಡ್ಡ ಸುಳ್ಳು ಇನ್ನೊಂದಿಲ್ಲ.  ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳುವ ಸದಾನಂದಗೌಡರಿಗೆ ನಾಚೀಕೆಯಾಗಲ್ವಾ? ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಖಾರವಾಗಿ ಪ್ರಶ್ನಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರದ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಸುಳ್ಳು ಹೇಳುತ್ತಿದ್ದಾರೆ. ಬರ ಪರಿಹಾರದ ಹಣ ಬಿಡುಗಡೆ ಮಾಡದವರು ಮೊದಲು ರಾಜೀನಾಮೆ ನೀಡಿ ತೊಲಗಲಿ ಎಂದು ತಿರುಗೇಟು ನೀಡಿದರು.
 
ಬರ ಪರಿಹಾರ ಬಿಡುಗಡೆ ವಿಳಂಬ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ಸದನಂದಗೌಡ, ಇವರೆಲ್ಲ ರಾಜೀನಾಮೆ ಕೊಟ್ಟ ಹೋಗಲಿ. ಕೇಂದ್ರದಿಂದ ನಾವೇ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳುತ್ತೇವೆ ಎಂದು ತಿರುಗೇಟು ನೀಡಿದ್ದರು. 
 
ಕೇಂದ್ರ ಸರಕಾರಕ್ಕೆ ಕೇವಲ ಮನವಿ ಸಲ್ಲಿಸಿ ಸುಮ್ಮನೆ ಕೂರುವುದಲ್ಲ. ಅದರ ಫಾಲೋಅಪ್ ಮಾಡಬೇಕು. ಪರಿಹಾರ ಬಂದಿಲ್ಲ ಎಂದು ಸುಮ್ಮನಿರೋದಲ್ಲ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆದ ತಕ್ಷಣ ದೆಹಲಿಗೆ ಹೋಗುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿಯಾಗಲಿ. ಇಲ್ಲೇ ಕುಳಿತುಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಸದಾನಂದಗೌಡ ಕಿಡಿಕಾರಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments