Webdunia - Bharat's app for daily news and videos

Install App

ಅಡಿಕೆ ರೋಗ ಅಧ್ಯಯನಕ್ಕೆ ಕೇಂದ್ರ ಸಮಿತಿ ರಾಜ್ಯಕ್ಕೆ ಆಗಮನ

Webdunia
ಶುಕ್ರವಾರ, 18 ನವೆಂಬರ್ 2022 (07:03 IST)
ಶಿವಮೊಗ್ಗ : ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇತ್ತೀಚೆಗೆ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು.

ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments