Webdunia - Bharat's app for daily news and videos

Install App

ಅಡಿಕೆ ರೋಗ ಅಧ್ಯಯನಕ್ಕೆ ಕೇಂದ್ರ ಸಮಿತಿ ರಾಜ್ಯಕ್ಕೆ ಆಗಮನ

Webdunia
ಶುಕ್ರವಾರ, 18 ನವೆಂಬರ್ 2022 (07:03 IST)
ಶಿವಮೊಗ್ಗ : ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇತ್ತೀಚೆಗೆ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು.

ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments