Webdunia - Bharat's app for daily news and videos

Install App

ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟ ಡಿಕೆ ಶಿವಕುಮಾರ್ ಗೆ ಕೇಂದ್ರ ಸರ್ಕಾರ ಠಕ್ಕರ್

Krishnaveni K
ಬುಧವಾರ, 19 ಮಾರ್ಚ್ 2025 (14:33 IST)
ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಿಯೇ ತೀರುತ್ತೇನೆ ಎಂದು ಹೊರಟಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೇಂದ್ರ ಸರ್ಕಾರ ಠಕ್ಕರ್ ಕೊಟ್ಟಿದೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ಡಿಕೆಶಿ ಯೋಜನೆ ಹಾಕಿದ್ದರು. ಅದರಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಅದನ್ನೀಗ ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಡಿಕೆಶಿ ಆಸೆಗೆ ತಣ್ಣೀರೆರಚಿದೆ.

ಈ ಹಿಂದೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾಗ ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯಂತೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದೀಗ ಕೇಂದ್ರ ಸರ್ಕಾರವೇ ಡಿಕೆ ಶಿವಕುಮಾರ್ ಪ್ರಸ್ತಾವವನ್ನು ತಿರಸ್ಕರಿಸಿದೆ. ಆ ಮೂಲಕ ಹೆಸರು ಬದಲಾವಣೆಗೆ ತಡೆ ನೀಡಿದೆ. ಈ ಭಾಗದ ಜನರ ವಿರೋಧವಿದೆ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರ ಪ್ರಸ್ತಾವನೆ ತಿರಸ್ಕರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments