Webdunia - Bharat's app for daily news and videos

Install App

ಕೇಂದ್ರ ಸರಕಾರದಿಂದ ವಿದ್ಯಾರ್ಥಿಗಳ ಮೇಲೆ ಬಿಜೆಪಿ, ಆರೆಸ್ಸೆಸ್ ಸಿದ್ಧಾಂತ ಹೇರುವ ಪ್ರಯತ್ನ: ಪರಮೇಶ್ವರ್

Webdunia
ಶನಿವಾರ, 20 ಫೆಬ್ರವರಿ 2016 (15:16 IST)
ಕೇಂದ್ರ ಸರಕಾರ ವಿದ್ಯಾರ್ಥಿ ಸಮುದಾಯಗಳ ಮೇಲೆ ಬಿಜೆಪಿ, ಆರೆಸ್ಸೆಸ್ ಸಿದ್ಧಾಂತ ಹೇರುವ ಪ್ರಯತ್ನ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ಬಿಜೆಪಿ ಅಜೆಂಡಾ ಬಿತ್ತುವ ಹುನ್ನಾರ ಆರಂಭವಾಗಿದೆ. ಆದರೆ, ಜಾತ್ಯಾತೀತ ರಾಷ್ಟ್ರದಲ್ಲಿ ಯಾವುದೇ ಒಂದು ಸಂಘಟನೆಯ ಅಥವಾ ಪಕ್ಷದ ಸಿದ್ದಾಂತ ಬಿತ್ತಲು ಸಾಧ್ಯವಿಲ್ಲ ಎಂದರು.
 
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದವರನ್ನು ಮೊದಲು ಬಂದಿಸಲಿ. ಮುಗ್ದ ವಿದ್ಯಾರ್ಥಿಗಳನ್ನು  ಬಲಿಕೊಡುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳು ಕೇಂದ್ರ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.
 
ಸಾರ್ ತಮ್ಮ ಹತ್ತಿರ ಎಷ್ಟು ವಾಚ್‌ಗಳಿವೆ. ಅದರ ರೇಟ್ ಎಷ್ಟು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮೊದಲಿನಿಂದಲೂ ವಾಚ್ ಹಾಕಿಕೊಳ್ಳುವುದಿಲ್ಲ ಆದ್ದರಿಂದ ಯಾವುದೇ ಸಮಸ್ಯೆ ಉದ್ಭವಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಗೆಚಟಾಕಿ ಹಾರಿಸಿದರು.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments