Select Your Language

Notifications

webdunia
webdunia
webdunia
webdunia

ಬಳ್ಳಾರಿ ಗಣಿಧಣಿಗಳ ಬಗ್ಗೆ ಕೇಂದ್ರ ಮೃದುಧೋರಣೆ: ಟಿ.ಬಿ.ಜಯಚಂದ್ರ

ಬಳ್ಳಾರಿ ಗಣಿಧಣಿಗಳ ಬಗ್ಗೆ ಕೇಂದ್ರ ಮೃದುಧೋರಣೆ: ಟಿ.ಬಿ.ಜಯಚಂದ್ರ
ಬೆಂಗಳೂರು , ಭಾನುವಾರ, 21 ಮೇ 2017 (14:34 IST)
ಬಳ್ಳಾರಿ ಗಣಿಧಣಿಗಳ ಬಗ್ಗೆ ಕೇಂದ್ರ ಮೃದುಧೋರಣೆ ತಾಳುತ್ತಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದ್ದಾರೆ.
 
ಸುಪ್ರೀಂಕೋರ್ಟ್ ಸೂಚನೆಯಂತೆ ವಿಶೇಷ ತನಿಖಾ ತಂಡ ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿದೆ. ಇದರಲ್ಲಿ ನಾನಾಗಲಿ ಅಥವಾ ಸಿಎಂ ಸಿದ್ದರಾಮಯ್ಯರ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದರು.
 
ದೊಡ್ಡ ದೊಡ್ಡಗಣಿಗಳ ಅಕ್ರಮಗಳ ಬಗ್ಗೆ ಕೇಂದ್ರ ಸರಕಾರ ಯಾಕೆ ಮೇಲ್ಮನವಿ ಸಲ್ಲಿಸುತ್ತಿಲ್ಲ. ಬಿಜೆಪಿ ನಾಯಕರ ಅಕ್ರಮಗಳನ್ನು ಮುಚ್ಚಿಹಾಕಲು ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಸುಪ್ರೀಂಕೋರ್ಟ್ 70 ಗಣಿಗಳ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ವಿಶೇಷ ತನಿಖಾ ತಂಡಕ್ಕೆ ಆದೇಶ ನೀಡಿದೆ. ಇದರಲ್ಲಿ ರಾಜ್ಯ ಸರಕಾರದ ಯಾವುದೇ ಪಾತ್ರವಿಲ್ಲ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಎಚ್ಚರಿಕೆ