Select Your Language

Notifications

webdunia
webdunia
webdunia
webdunia

ಕಾವೇರಿಗಾಗಿ ದೆಹಲಿಯತ್ತ ಪ್ರಯಾಣ ಬೆಳೆಸಿರುವ ಸಿಎಂ ಸಿದ್ದರಾಮಯ್ಯ

ಕಾವೇರಿಗಾಗಿ ದೆಹಲಿಯತ್ತ ಪ್ರಯಾಣ ಬೆಳೆಸಿರುವ ಸಿಎಂ ಸಿದ್ದರಾಮಯ್ಯ
ನವದೆಹಲಿ , ಗುರುವಾರ, 29 ಸೆಪ್ಟಂಬರ್ 2016 (11:04 IST)
ಕಾವೇರಿ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
 
ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಟ ಮುಖ್ಯಮಂತ್ರಿ ಸಿದ್ದರಾಮಯ್ಯ, ನವದೆಹಲಿ ತಲುಪಿ ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರಕಾರದ ಮಧ್ಯಸ್ಥಿಕೆಯಲ್ಲಿ ಉಭಯ ರಾಜ್ಯಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 
 
ಇಂದು ಮುಂಜಾನೆ 11.30 ಕ್ಕೆ ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ನವದೆಹಲಿ ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಭಯ ರಾಜ್ಯಗಳ ನಡುವಿನ ಜಲ ವಿವಾದ ಬಗೆಹರಿಸಲು ಕೇಂದ್ರ ಮಧ್ಯಸ್ಥಿಕೆ ವಹಿಸುತ್ತಿರುವುದು ಸಂತಸದ ವಿಷಯ. ಕೇಂದ್ರದ ಮಧ್ಯಸ್ಥಿಕೆಯಿಂದ ವಿವಾದ ಇತ್ಯರ್ಥವಾಗುಲ ವಿಶ್ವಾಸವಿದೆ ಎಂದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಕೀಲೆಯ ಮೇಲೆ ಹಿರಿಯ ಕಾಂಗ್ರೆಸ್ ನಾಯಕ, ಸಂಸದನಿಂದ ಅತ್ಯಾಚಾರ