Webdunia - Bharat's app for daily news and videos

Install App

ಕಾವೇರಿಗಾಗಿ ದೆಹಲಿಯತ್ತ ಪ್ರಯಾಣ ಬೆಳೆಸಿರುವ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 29 ಸೆಪ್ಟಂಬರ್ 2016 (11:04 IST)
ಕಾವೇರಿ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
 
ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಟ ಮುಖ್ಯಮಂತ್ರಿ ಸಿದ್ದರಾಮಯ್ಯ, ನವದೆಹಲಿ ತಲುಪಿ ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರಕಾರದ ಮಧ್ಯಸ್ಥಿಕೆಯಲ್ಲಿ ಉಭಯ ರಾಜ್ಯಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 
 
ಇಂದು ಮುಂಜಾನೆ 11.30 ಕ್ಕೆ ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ನವದೆಹಲಿ ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಭಯ ರಾಜ್ಯಗಳ ನಡುವಿನ ಜಲ ವಿವಾದ ಬಗೆಹರಿಸಲು ಕೇಂದ್ರ ಮಧ್ಯಸ್ಥಿಕೆ ವಹಿಸುತ್ತಿರುವುದು ಸಂತಸದ ವಿಷಯ. ಕೇಂದ್ರದ ಮಧ್ಯಸ್ಥಿಕೆಯಿಂದ ವಿವಾದ ಇತ್ಯರ್ಥವಾಗುಲ ವಿಶ್ವಾಸವಿದೆ ಎಂದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments