Webdunia - Bharat's app for daily news and videos

Install App

PSI ಪರಶುರಾಮ್ ಪ್ರಕರಣದ ವರದಿ ಕೇಳಿದ ಕೇಂದ್ರ: ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ

Krishnaveni K
ಗುರುವಾರ, 5 ಸೆಪ್ಟಂಬರ್ 2024 (12:26 IST)
ಬೆಂಗಳೂರು: ಪಿಎಸ್ ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣ ಈಗ ರಾಜ್ಯ ಸರ್ಕಾರಕ್ಕೆ ಉರುಳಾಗುವ ಸಾಧ್ಯತೆಯಿದೆ. ಈ ಪ್ರಕರಣದ ಬಗ್ಗೆ ಕೇಂದ್ರ ರಾಜ್ಯ ಸರ್ಕಾರದ ಬಳಿ ವರದಿ ಕೇಳಿದೆ.

ಯಾದಗಿರಿ ಪಿಎಸ್ ಐ ಪರಶುರಾಮ್ ಸಾವಿನ ಬಗ್ಗೆ ಸಿಬಿಐ ತನಿಖೆ ಮಾಡಬೇಕು ಎಂದು ಈಗಾಗಲೇ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಪ್ರಕರಣದ ಬಗ್ಗೆ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಇದರಿಂದ ಈ ಪ್ರಕರಣ ರಾಜ್ಯಕ್ಕೆ ಮತ್ತೊಂದು ಉರುಳಾಗುವ ಸಾಧ್ಯತೆಯಿದೆ.

ಪಿಎಸ್ ಐ ಪರಶುರಾಮ್ ಸಾವಿನ ಪ್ರಕರಣದಲ್ಲಿ ರಾಜ್ಯ ಸರ್ಕಾರದ ತನಿಖೆ ತೃಪ್ತಿಕರವಾಗಿಲ್ಲ ಎಂದು ಶೋಭಾ ಕರಂದ್ಲಾಜೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದಕ್ಕೀಗ ಕೇಂದ್ರ ಗೃಹ ಸಚಿವಾಲಯ ಪ್ರತಿಕ್ರಿಯಿಸಿದೆ. ಯಾದಗಿರಿ ಪಿಎಸ್ ಐ ಪರಶುರಾಮ್ ಸಾವಿನ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ನಡೆಸಿದ್ದಾರೆ.

ಆದರೆ ತನಿಖೆಯಲ್ಲಿ ಹೆಚ್ಚು ಪ್ರಗತಿ ಕಂಡುಬಂದಿಲ್ಲ ಎಂದು ಸಂಸದೆ ಆರೋಪಿಸಿದ್ದರು. ಈಗ ತನಿಖೆಗೆ ಕೇಂದ್ರ ತನಿಖಾ ದಳ ಎಂಟ್ರಿ ಕೊಟ್ಟರೆ ಮತ್ತೆ ರಾಜ್ಯ, ಕೇಂದ್ರದ ನಡುವೆ ಮತ್ತೊಂದು ಸುತ್ತಿನ ಜಟಾಪಟಿ ನಡೆಯುವುದು ಖಂಡಿತಾ. ಈಗಾಗಲೇ ಮುಡಾ, ವಾಲ್ಮೀಕಿ ಹಗರಣದ ಸುಳಿಯಲ್ಲಿರುವ ರಾಜ್ಯ ಸರ್ಕಾರಕ್ಕೆ ಈ ಪ್ರಕರಣ ಮತ್ತೊಂದು ಉರುಳಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments