Webdunia - Bharat's app for daily news and videos

Install App

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್: ಚೆನ್ನಿಗಪ್ಪ

Webdunia
ಮಂಗಳವಾರ, 5 ಜೂನ್ 2018 (14:11 IST)
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್. ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಜೆಡಿಎಸ್ ಮುಖಂಡ ಚೆನ್ನಿಗಪ್ಪ ವಾಗ್ದಾಳಿ ನಡೆಸಿದ್ದಾರೆ. 
ಅನಂತ ಕುಮಾರ್ ಹೆಗಡೆ ಜೆಡಿಎಸ್ ಪಕ್ಷವನ್ನು ಪುಟುಗೋಸಿ ಪಕ್ಷವೆಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಪಾರ್ಟಿ ಪುಟ್ಗೋಸಿ ಅಲ್ಲಾ..ಪುಟ್ಗೋಸಿ ಮನುಷ್ಯನ ಮಾನ ಮುಚ್ಚಿಕೊಳ್ಳುವ ವಸ್ತು ಎನ್ನುವುದನ್ನು ಹೆಗ್ಡೆ ಮರೆತಂತಿದೆ ಅದು ಗೊತ್ತಿಲ್ಲ ಆ ಮನುಷ್ಯನಿಗೆ ಎಂದು ತಿರುಗೇಟು ನೀಡಿದರು.
 
ಅನಂತಕುಮಾರ ಹೆಗಡೆಯವರು ಮೆಂಟಲ್ ಮತ್ತೊಬ್ಬ ಬಿಜೆಪಿ ಮುಖಂಡ ಸುರೇಶ್ ಗೌಡನ ತರ ಮೆಂಟಲ್. ತಮ್ಮ ಸ್ಥಾನದ ಘನತೆ ಗೌರವ ಅರಿಯದೇ ಬಾಯಿಗೆ ಬಂದಂತೆ ಮಾತನಾಡಿ ಪಬ್ಲಿಸಿಟಿ ಪಡೆಯುವ ಗಿಮಿಕ್ ಆರಂಭಿಸಿದ್ದಾರೆ. ಇಂತಹ ಹೇಳಿಕೆಗಳಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಗುಡುಗಿದರು.
 
ಅನಂತಕುಮಾರ್ ತಾವು ಆಡಿದ ಮಾತನ್ನ ವಾಪಸ್ ತಗೊಳ್ಳಬೇಕು ಇಲ್ಲಾವಾದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಜೆಡಿಎಸ್ ಪಕ್ಷದ ಶಕ್ತಿ ಏನು ಅನ್ನುವುದನ್ನು ತೋರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಚೆನ್ನಿಗಪ್ಪ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments