Webdunia - Bharat's app for daily news and videos

Install App

ದಿವಾಳಿಯಾಗಿದ್ದಕ್ಕೆ ದೇವಾಲಯ ಹುಂಡಿಗೆ ಕೈ ಹಾಕಿದ ಕಾಂಗ್ರೆಸ್: ಪ್ರಹ್ಲಾದ್ ಜೋಶಿ

Krishnaveni K
ಶುಕ್ರವಾರ, 23 ಫೆಬ್ರವರಿ 2024 (17:35 IST)
ಬೆಂಗಳೂರು: ರಾಜ್ಯ ಸರ್ಕಾರ ದೇವಾಲಯಗಳ ಆದಾಯದ ಮೇಲೆ 10% ತೆರಿಗೆ ವಿಧಿಸಿರುವ ಕ್ರಮದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಅಧಿವೇಶನದಲ್ಲಿ ಮೊನ್ನೆಯಷ್ಟೇ ರಾಜ್ಯ ಸರ್ಕಾರ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳ ಆದಾಯದಿಂದ 10% ಸರ್ಕಾರಕ್ಕೆ ತೆರಿಗೆ ಕಟ್ಟಬೇಕು ಎಂದು ನಿಯಮ ಜಾರಿ ಮಾಡಿತ್ತು. ಈ ಬಗ್ಗೆ ವಿಪಕ್ಷ ಬಿಜೆಪಿ ತೀವ್ರ ಟೀಕೆ ಮಾಡಿದೆ. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಸಿಎಂ ಸಿದ್ದರಾಮಯ್ಯ 1 ಕೋಟಿ ರೂ. ಗೂ ಅಧಿಕ ಆದಾಯವಿರುವ ದೇವಾಲಯಗಳಿಗೆ ಮಾತ್ರ ತೆರಿಗೆ ಅನ್ವಯವಾಗುತ್ತದೆ. ಈ ಹಣವನ್ನು ಬೇರೆ ಸಮುದಾಯದವರಿಗೆ ಬಳಕೆ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಹಾಗಿದ್ದರೂ ಇದು ಕೇವಲ ಹಿಂದೂ ದೇವಾಲಯಗಳಿಗೆ ಮಾತ್ರವೇಕೆ? ಬೇರೆ ಸಮುದಾಯದ ಧಾರ್ಮಿಕ ಕೇಂದ್ರಗಳ ಮೇಲೆ ಸರ್ಕಾರ ನಿಯಂತ್ರಣ ಸಾಧಿಸಲ್ಲ ಯಾಕೆ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ.  ತಮ್ಮ ವಿಫಲತೆಯನ್ನು ಮುಚ್ಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದರು. ಇದೀಗ ರಾಜ್ಯದ ಬೊಕ್ಕಸ ದಿವಾಳಿಯಾಗಿದೆ. ಇದಕ್ಕಾಗಿ ದೇವಾಲಯಗಳ ಮೇಲೆ ಕಣ್ಣು ಬಿದ್ದಿದೆ. ಈ ಬಗ್ಗೆ ಬಿಜೆಪಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದೆ. ಕಾಂಗ್ರೆಸ್ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಇದರ ವಿರುದ್ಧ ನಾವು ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments