Webdunia - Bharat's app for daily news and videos

Install App

ಕೇಂದ್ರದಿಂದ ಬರ ಪರಿಹಾರದ ನಯಾಪೈಸೆಯೂ ಬಂದಿಲ್ಲ

Webdunia
ಸೋಮವಾರ, 23 ಜನವರಿ 2017 (17:06 IST)
ಬರ ಪರಿಹಾರ ಕಾಮಗಾರಿಗಳಿಗೆ ಕೇಂದ್ರದಿಂದ ನೆರವಿನ ರೂಪದಲ್ಲಿ ಈವರೆಗೆ ಒಂದು ಪೈಸೆಯೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಪ್ರತಿಮೆ ಬಳಿ ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮುಖ್ಯಮಂತ್ರಿಯವರು ಸುದ್ದಿಗಾರರೊಂದಿಗೆ ಮಾತನಾಡಿದರು.
 
ಬರ ಪರಿಹಾರ ಕಾಮಗಾರಿಗಳಿಗೆ ನಿಮಯಗಳ ಅನುಸಾರ 4072 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಅಕ್ಟೋಬರ್ 27ರಂದು ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 1782 ಕೋಟಿ ರೂ. ಬಿಡುಗಡೆಗೆ ಶಿಫಾರಸು ಮಾಡಲಾಗಿದೆ. ಆದರೆ ಈ ವರೆಗೆ ಅನುದಾನ ಬಂದಿಲ್ಲ ಎಂದು ಹೇಳಿದರು.
 
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ನೆರೆಯಿಂದ ಭಾರಿ ಅನಾಹುತ ಸಂಭವಿಸಿತ್ತು. ಅಂದಿನ ಪ್ರಧಾನಿ ಮನಮೋಹನಸಿಂಗ್ ಅವರು 2009ರಲ್ಲಿ ರಾಜ್ಯಕ್ಕೆ ಭೇಟಿ ನೀಡಿ ಸ್ಥಳದಲ್ಲೇ ಒಂದೂವರೆ ಸಾವಿರ ಕೋಟಿ ರೂ.ಗಳ ನೆರವು ಘೋಷಣೆ ಮಾಡಿದರು.
 
ಕೇಂದ್ರದ ಕರ್ತವ್ಯ: ಬರ ಪರಿಹಾರಕ್ಕೆ ಅನುದಾನ ಒದಗಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಅದು ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ.  ಹದಿನಾಲ್ಕನೇ ಹಣಕಾಸು ಆಯೋಗದ ಮಾರ್ಗಸೂಚಿಗಳ ಪ್ರಕಾರವೂ ಬರ ಪರಿಹಾರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ಆಧ್ಯತೆಯ ಮೇರೆಗೆ ಅನುದಾನವನ್ನು ಒದಗಿಸಬೇಕು ಎಂದರು.
 
ಬರ ಪರಿಹಾರ ಕಾಮಗಾರಿಗಳ ಕುರಿತಂತೆ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುವ ಬದಲು ತುರ್ತಾಗಿ ಅನುದಾನ ಬಿಡುಗಡೆ ಮಾಡುವಂತೆ  ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಲಹೆ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments