ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

Webdunia
ಸೋಮವಾರ, 14 ಮಾರ್ಚ್ 2022 (09:11 IST)
ಮಂಡ್ಯ : ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ವೈರಮುಡಿ ಬ್ರಹ್ಮೋತ್ಸವ ಆರಂಭವಾಗಿದೆ.

ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ಸರಳವಾಗಿ ನಡೆದಿದ್ದ ಉತ್ಸವ ಈ ಬಾರಿ ವಿಜೃಂಭಣೆಯಿಂದ ನೆರವೇರಲಿದೆ. ಈ ಹಿನ್ನೆಲೆ ಇಡೀ ಮೇಲುಕೋಟೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳುಸುತ್ತಿದೆ.

ಭೂ ವೈಕುಂಠ ಎಂಬ ಪ್ರಖ್ಯಾತವಾಗಿರುವ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಹಲವು ಪುರಾಣ, ಇತಿಹಾಸಗಳನ್ನು ತನ್ನೊಡಲಲ್ಲಿ ತುಂಬಿಕೊಂಡ ಪ್ರಮುಖ ಧಾರ್ಮಿಕ ಕ್ಷೇತ್ರ.
ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾದಿಂದಾಗಿ ವೈರಮುಡಿ ಜಾತ್ರಾಮಹೋತ್ಸವ ಭಕ್ತರಿಲ್ಲದೇ ಅತ್ಯಂತ ಸರಳವಾಗಿ ನೆರವೇರಿತ್ತು.

ಈ ಬಾರಿ ವಿಜೃಂಭಣೆಯಿಂದ ಉತ್ಸವ ಆಚರಿಸಲು ಮಂಡ್ಯ ಜಿಲ್ಲಾಡಳಿತ ನಿರ್ಧಾರ ಮಾಡಿದ್ದು, 9 ದಿನ ನಡೆಯುವ ಐತಿಹಾಸಿಕ ಬ್ರಹ್ಮೋತ್ಸವಕ್ಕೆ ಕಳೆದ ಎರಡು ದಿನಗಳ ಹಿಂದೆ ಬೆಳಗ್ಗೆ ಗರುಡ ಧ್ವಜಾರೋಹಣದೊಂದಿಗೆ ಚಾಲನೆ ದೊರಕಿದೆ.  

ಮೇಲುಕೋಟೆಗೆ ದೀಪಾಲಂಕಾರ ಮಾಡಲಾಗಿದ್ದು, ಇಡೀ ಮೇಲುಕೋಟೆಯಲ್ಲಿ ವೈಕುಂಠವೇ ಧರಗೆ ಇಳಿದಂತೆ ಕಾಣುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಬೆಂಗಳೂರು, ಮೈಸೂರು, ಮಂಡ್ಯ, ಹಾಸನದಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶದಿಂದ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದು, ಮೇಲುಕೋಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇನ್ನು 17ರಂದು ಮಹಾ ರಥೋತ್ಸವ ಹಾಗೂ 18ರಂದು ಕಲ್ಯಾಣಿಯಲ್ಲಿ ತೆಪ್ಪೋತ್ಸವ ಹಾಗೂ ಲೇಜರ್ ಶೋ ನಡೆಯಲಿದೆ.

ಒಟ್ಟಾರೆ ಈ ಬಾರಿಯ ಅದ್ದೂರಿ ಜಾತ್ರಾಮಹೋತ್ಸವಕ್ಕೆ10 ಲಕ್ಷ ಜನ ಸೇರುವ ನಿರೀಕ್ಷಿಸಲಾಗಿದ್ದು, ಭದ್ರತೆಗಾಗಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೆ ಜನರ ಆರೋಗ್ಯದ ದೃಷ್ಟಿಯಿಂದ 10 ಅಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡ ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments