CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Krishnaveni K
ಶನಿವಾರ, 19 ಏಪ್ರಿಲ್ 2025 (11:06 IST)
ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಹಾಜರಾದ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಒಪ್ಪಿಲ್ಲವೆಂದು ಪರೀಕ್ಷೆ ಬರೆಯಲು ಬಿಡದ ಘಟನೆ ಈಗ ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರದ ಸಚಿವರುಗಳೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ. ಆದರೆ ಇದೆಲ್ಲಾ ಸರಿ, ಆ ವಿದ್ಯಾರ್ಥಿಯ ಭವಿಷ್ಯದ ಕತೆಯೇನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ.

ಶಿವಮೊಗ್ಗ ಮತ್ತು ಬೀದರ್ ನಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಪರೀಕ್ಷಾ ಕೇಂದ್ರದಲ್ಲಿ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಆದರೆ ನಿಯಮದಲ್ಲಿ ಎಲ್ಲೂ ಜನಿವಾರ ತೆಗೆಯಬೇಕು ಎಂದಿಲ್ಲ. ಹಾಗಿದ್ದರೂ ಪರೀಕ್ಷಕರು ಈ ರೀತಿ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಶಿವಮೊಗ್ಗದ ವಿದ್ಯಾರ್ಥಿ ಅಂತೂ ಪರೀಕ್ಷೆ ಬರೆದಿದ್ದಾನೆ ಎನ್ನಲಾಗಿದೆ. ಆದರೆ ಬೀದರ್ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಹೀಗಾಗಿ ಆತನ ಮುಂದಿನ ಭವಿಷ್ಯವೇನು ಎಂದು ಪ್ರಶ್ನೆ ಮೂಡಿದೆ. ಸಚಿವರೇನೋ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುತ್ತಾರೆ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಾರೆ. ಪರೀಕ್ಷಾ ಪ್ರಾಧಿಕಾರವೂ ಆದ ಪ್ರಮಾದಕ್ಕೆ ಕ್ಷಮೆ ಕೇಳಿದೆ.

ಆದರೆ ಮೊದಲ ದಿನ ಪರೀಕ್ಷೆ ಬರೆದು ಎರಡನೇ ದಿನ ಗಣಿತ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಯ ಭವಿಷ್ಯವೇ ಹಾಳಾಗಿದೆ. ಆತನಿಗೆ ಯಾವ ರೀತಿ ಪರಿಹಾರ ಕೊಡುತ್ತೀರಿ ಎಂಬುದು ಎಲ್ಲರ ಪ್ರಶ್ನೆಯಾಗಿದೆ.

ಇದರ ಬೆನ್ನಲ್ಲೇ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ವಿದ್ಯಾರ್ಥಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಯು ಈಗಾಗಲೇ ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವ ಶಾಸ್ತ್ರ ಪರೀಕ್ಷೆ ಬರೆದಿದ್ದಾನೆ. ಹೀಗಾಗಿ ಈ ಅಂಕಗಳ ಆಧಾರದಲ್ಲಿ ಪ್ರವೇಶ ಪಡೆಯುವ ಕೃಷಿ, ನರ್ಸಿಂಗ್, ಪಶು ವೈದ್ಯಕೀಯ ವಿಭಾಗದ ಪ್ರವೇಶಕ್ಕೆ ವಿದ್ಯಾರ್ಥಿ ಅರ್ಹನಾಗುತ್ತಾನೆ. ಒಂದು ವೇಳೆ ವಿದ್ಯಾರ್ಥಿ ಇಂಜಿನಿಯರಿಂಗ್ ಪ್ರವೇಶ ಪಡೆಯಲು ಬಯಸಿದರೆ ನಮ್ಮ ನಿಯಮಗಳಲ್ಲಿ ಅದಕ್ಕೆ ಅವಕಾಶವಿದೆಯೇ ಎಂದು ನೋಡುತ್ತೇವೆ. ಅವನದಲ್ಲದ ತಪ್ಪಿಗೆ ಅವನಿಗೆ ಶಿಕ್ಷೆ ಸಿಗುವಂತಾಗಬಾರದು. ಈಗಾಗಲೇ ಜಿಲ್ಲಾವಾರು ವರದಿ ತರಿಸುತ್ತಿದ್ದೇವೆ. ವರದಿ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments