ನಾಳೆಯಿಂದ ಸಿಇಟಿ ಪರೀಕ್ಷೆ: ರಾಜ್ಯದ 486 ಪರೀಕ್ಷಾ ಕೇಂದ್ರ ಸ್ಥಾಪನೆ!

Webdunia
ಬುಧವಾರ, 15 ಜೂನ್ 2022 (16:47 IST)
ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸೂಸೂತ್ರವಾಗಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಮೂರು ದಿನಗಳ ಸಿಇಟಿ ಪರೀಕ್ಷೆ ನಡೆಯಲಿದೆ ಎಂದರು.
ನಾಳೆ ಅಂದರೆ ಜೂನ್‌ 16ರಂದು ಬೆಳಿಗ್ಗೆ 10.30ಕ್ಕೆ ಜೀವಶಾಸ್ತ್ರ ಪರೀಕ್ಷೆ, ಮಧ್ಯಾಹ್ನ 2.30ಕ್ಕೆ ಗಣಿತ, 17ರಂದು ಬೆಳಿಗ್ಗೆ 10.30ಕ್ಕೆ ಭೌತಶಾಸ್ತ್ರ, ಮಧ್ಯಾಹ್ನ 2.30ಕ್ಕೆ ರಸಾಯನ ಶಾಸ್ತ್ರ, 18ರಂದು 11.30ಕ್ಕೆ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿವೆ.
ರಾಜ್ಯದ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟಾರೆ 2,16,526  ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 87 ಪರೀಕ್ಷಾ ಕೇಂದ್ರಗಳು ಇದ್ದರೆ, ವಿವಿಧ ಜಿಲ್ಲೆಗಳಲ್ಲಿ 399 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ 6 ಕೇಂದ್ರಗಳಲ್ಲಿ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments