CET Exam ಜನಿವಾರ ಪ್ರಕರಣ: ವಿದ್ಯಾರ್ಥಿ ಸಚಿವ್ರತ್ ಕುಲಕರ್ಣಿಗೆ ಬಿಗ್ ಆಫರ್ ಕೊಟ್ಟ ಸಚಿವರು

Krishnaveni K
ಶುಕ್ರವಾರ, 25 ಏಪ್ರಿಲ್ 2025 (13:51 IST)
Photo Credit: X
ಬೆಂಗಳೂರು: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಗೆ ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ಬಿಗ್ ಆಫರ್ ನೀಡಿದ್ದಾರೆ.

ಬೀದರ್ ನ ಸುಚಿವ್ರತ್ ಕುಲಕರ್ಣಿಗೆ ಜನಿವಾರ ಹಾಕಿದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಅಧಿಕಾರಿಗಳು ಬಿಡಲಿಲ್ಲ. ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜ್ಯಾದ್ಯಂತ ಬ್ರಾಹ್ಮಣ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ್ದವು.

ಇದರ ಬೆನ್ನಲ್ಲೇ ವಿದ್ಯಾರ್ಥಿಗೆ ನ್ಯಾಯ ಕೊಡಿಸುವುದಾಗಿ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಇದೀಗ ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ವಿದ್ಯಾರ್ಥಿಗೆ ಎರಡು ಅವಕಾಶ ನೀಡಿದ್ದಾರೆ. ಒಂದು ಫಿಸಿಕ್ಸ್ ಮತ್ತು ಕೆಮಿಸ್ಟ್ರಿ ಅಂಕದ ಆಧಾರದಲ್ಲಿ ವಿದ್ಯಾರ್ಥಿಗೆ ರಾಂಕ್ ನೀಡುವುದು. ಎರಡನೆಯದ್ದು ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶ ನೀಡುವುದು.

ಇದೀಗ ವಿದ್ಯಾರ್ಥಿ ಸುಚಿವ್ರತ್ ಯಾವುದನ್ನು ಆಯ್ಕೆ ಮಾಡುತ್ತಾನೆ ನೋಡಬೇಕಿದೆ. ಇದರ ನಡುವೆ ಅರಣ್ಯಸಚಿವ ಈಶ್ವರ್ ಖಂಡ್ರೆ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗೆ ತಮ್ಮದೇ ಕಾಲೇಜಿನಲ್ಲಿ ಉಚಿತವಾಗಿ ಇಂಜಿನಿಯರಿಂಗ್ ಸೀಟ್ ಕೊಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಈಗ ಆಯ್ಕೆ ಸುಚಿವ್ರತ್ ಮುಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್‌.ಅಶೋಕ

ಮಮತಾ ಬ್ಯಾನರ್ಜಿ ತಲೆನೋವಾಗಲಿದೆ ಹುಮಾಯೂನ್ ಹೊಸ ನಡೆ

ಗೋವಾ ಪಬ್ ದುರಂತ: ಬೆಂಗಳೂರಿನ ಪಬ್‌ಗಳಲ್ಲಿ ಬಿಗಿಗೊಳಿಸಿದ ಸುರಕ್ಷತಾ ಕ್ರಮ

ಮುಂದಿನ ಸುದ್ದಿ
Show comments