Webdunia - Bharat's app for daily news and videos

Install App

ಮೇ.1ಕ್ಕೆ ಸಿಜಿಎಸ್ ಕಾನ್​​​ಕ್ಲೇವ್​ ಶೃಂಗಸಭೆ

Webdunia
ಶನಿವಾರ, 30 ಏಪ್ರಿಲ್ 2022 (20:12 IST)
ಪ್ರತಿಷ್ಠಿತ ಸುರಾನಾ ಕಾಲೇಜಿನ 3 ನೇ ಆವೃತ್ತಿಯ ಸಿಜಿಎಸ್ ಕಾನ್ ಕ್ಲೇವ್ ನ – ವಾರ್ಷಿಕ ಪರಿವರ್ತನೆಯ ನಾಯಕತ್ವ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ 1 ಮೇ 2022 ರಂದು ಬೆಂಗಳೂರಿನ ಸೋಫಯಾ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಡಾ. ಕಿರಣ್‌ ಬೇಡಿ, ಪದ್ಮಶ್ರೀ ಡಾ. ರಮಣ ರಾವ್‌, ಸಮರ್ಥನಂ ಸಂಸ್ಥೆಯ ಡಾ. ಮಹಾಂತೇಶ್‌ ಅವರಿಗೆ ಜಿ ಸಿ ಸುರಾನಾ ಲೀಡರ್‌ ಶಿಪ್‌ ಪ್ರಶಸ್ತಿ ನೀಡಿ ಗೌರವಿಸಾಗುವುದು ಎಂದು ಸುರಾನಾ ಎಜುಕೇಶನಲ್‌ ಇನ್ಸಿಟ್ಯೂಷನ್‌ಗಳ ವ್ಯವಸ್ಥಾಪಕ ಟ್ರಸ್ಟಿ ಡಾ. ಅರ್ಚನಾ ಸುರಾನಾ ತಿಳಿಸಿದರು. ಒಂದೇ ಸೂರಿನಡಿ ತರುವುದು ಮತ್ತು ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಶಿಕ್ಷಣ ತಜ್ಞರಿಗೆ ಸಂಬಂಧಿಸಿದ ವಿಚಾರಗಳ ಕುರಿತು ವಿಚಾರ ಮಂಥನ ಮಾಡುವ ವೇದಿಕೆಯಾಗಲಿದೆ ಎಂದು ಹೇಳಿದರು. ಈ ಸಮಾರಂಭಕ್ಕೆ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ, ಐಟಿ & ಬಿಟಿ, ವಿಜ್ಞಾನ & ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments