Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮುಂದುವರೆದ ಸರಗಳ್ಳತನ

Webdunia
ಭಾನುವಾರ, 23 ಆಗಸ್ಟ್ 2015 (11:32 IST)
ಬೆಂಗಳೂರಿನಲ್ಲಿ ಸರಗಳ್ಳತನದ ಪ್ರಕರಣಗಳು ಮುಂದುವರೆದಿದ್ದು ಬಸವೇಶ್ವರನಗರದಲ್ಲಿ ಸುಶೀಲಮ್ಮ ಎಂಬುವವರ 50 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ.

ಸಂಬಂಧಿಕರಿಗೆ ಬಸ್ ಹತ್ತಿಸಿ ಮನೆಗೆ ಹಿಂತಿರುಗುತ್ತಿದ್ದ ಸುಶೀಲಮ್ಮ ಅವರ ಬಳಿ ಬಂದು ನಿಂತ ಪಲ್ಸರ್ ಬೈಕ್‌ನಲ್ಲಿದ್ದ ಇಬ್ಬರು ಕಳ್ಳರು ಅವರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. 
 
ಬೆಂಗಳೂರಿನಲ್ಲಿ ಸರಗಳ್ಳತನ ಅವ್ಯಾಹತವಾಗಿ ನಡೆಯುತ್ತಿದ್ದು, ಕಳೆದ ವಾರ ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಅವರಿಂದ 20ರಿಂದ 25 ಸರಗಳನ್ನು ವಶಪಡಿಸಿಕೊಳ್ಳಲಾಗಿತ್ತು. 
 
ಆದರೆ ಇಂದು ಮತ್ತೆ ಬಸವೇಶ್ವರ ನಗರದಲ್ಲಿ ದುಷ್ಕೃತ್ಯ ಮರುಕಳಿಸಿದ್ದು ಸಾರ್ವಜನಿಕರ ಮತ್ತು ಪೊಲೀಸರ ತಲೆನೋವನ್ನು ಮತ್ತಷ್ಟು ಹೆಚ್ಚಿಸಿದೆ. 
 
ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments