Webdunia - Bharat's app for daily news and videos

Install App

ದೊಡ್ಮನೆಯಿಂದ ಹೊರಬಂದು ನ್ಯಾಯಾಲಯದಲ್ಲಿ ಕಾಣಿಸಿಕೊಂಡ ಚೈತ್ರಾ ಕುಂದಾಪುರ

Sampriya
ಮಂಗಳವಾರ, 3 ಡಿಸೆಂಬರ್ 2024 (14:28 IST)
Photo Courtesy X
ಬೆಂಗಳೂರು: ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ 11ರ ಶೋನಿಂದ ಸ್ಪರ್ಧಿ ಚೈತ್ರಾ ಕುಂದಾಪುರ ಹೊರಬಂದಿದ್ದಾರೆ. ಈ ಹಿಂದೆ ಅವರ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿಎಂಎಂ ಕೋರ್ಟ್ ಮುಂದೆ ಚೈತ್ರಾ ಹಾಜರಾಗಿದ್ದಾರೆ.

ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ ₹ 5 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಬಿಗ್ ಬಾಸ್‌ನಿಂದ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಅಟೆಂಡ್ ಆಗಿದ್ದಾರೆ.

ಚೈತ್ರಾ, ಶ್ರೀಕಾಂತ್ ಸೇರಿದಂತೆ ಮೂವರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜ.13ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ಸೂಚಿಸಿದ್ದಾರೆ.

ಇನ್ನೂ ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಈ ಹಿಂದೆ ವರ್ತೂರು ಸಂತೋಷ್ ಅವರು ಒಂದು ವಾರಗಳ ಕಾಲ ಜೈಲು ವಾಸ ಅನುಭವಿಸಿದ್ದರು. ಆ ನಂತರ ಬಿಗ್ ಬಾಸ್‌ಗೆ ಬಂದಿದ್ದರು. ಅದೇ ರೀತಿ ಇದೀಗ ಮತ್ತೆ ಚೈತ್ರಾ ಕೂಡ ಬಿಗ್ ಬಾಸ್‌ಗೆ ಹೋಗ್ತಾರಾ? ಎಂದು ಕಾದುನೋಡಬೇಕಿದೆ.

ಉದ್ಯಮಿ ಗೋವಿಂದ ಪೂಜಾರಿಗೆ ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ ಚೈತ್ರಾ ಮತ್ತು ಆಕೆಯ ತಂಡ ₹ 5 ಕೋಟಿ ವಂಚಿಸಿದ್ದಾರೆ ಎಂದು ಪ್ರಕರಣ ದಾಖಲಿಸಿ, ಆಕೆಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನು ಪಡೆದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments