Webdunia - Bharat's app for daily news and videos

Install App

ಚಾಲಾಕಿವೋರ್ವ 1.9 ಲಕ್ಷ ರೂ. ಮೌಲ್ಯದ 2 ಲ್ಯಾಪ್‌ಟಾಪ್ ಕಳವು ಮಾಡಿ ಪರಾರಿ

Webdunia
ಮಂಗಳವಾರ, 5 ಅಕ್ಟೋಬರ್ 2021 (21:10 IST)
ಬೆಂಗಳೂರು: ಪಿಜಿಗೆ ಹೊಸದಾಗಿ ಬಂದಿರುವುದಾಗಿ ಹೇಳಿ ರೂಂನ ಕೀ ಪಡೆದ ಚಾಲಾಕಿವೋರ್ವ 1.9 ಲಕ್ಷ ರೂ. ಮೌಲ್ಯದ 2 ಲ್ಯಾಪ್‌ಟಾಪ್ ಕಳವು ಮಾಡಿ ಪರಾರಿಯಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಬಿ.ಟಿ.ಎಂ ಲೇಔಟ್ 1ನೇ ಹಂತದಲ್ಲಿರುವ ಭವಿಷ್ಯ ಪಿಜಿಯಲ್ಲಿ ಸ್ನೇಹಿತ ರಾಜ್‌ಶಾ ಜೊತೆಗೆ ಮಕರಂದ್ ಎಂಬುವರು ವಾಸಿಸುತ್ತಿದ್ದರು. ಸೆ. 29ರ ಮಧ್ಯಾಹ್ನ 1 ಗಂಟೆಯಲ್ಲಿ ರೂಂಗೆ ಬಂದ ಅಪರಿಚಿತ ವ್ಯಕ್ತಿ ತಾನು ಹೊಸದಾಗಿ ಇದೇ ಪಿಜಿಗೆ ಸೇರಿದ್ದೇನೆ. ಮಾಲೀಕರು ಈ ರೂಂನಲ್ಲಿ ಇರಲು ಹೇಳಿದ್ದಾರೆ. ಕೀ ಕೊಟ್ಟರೆ ಲಗೇಜ್ ತರುತ್ತೇನೆ ಎಂದು ಹೇಳಿ ಮಕರಂದ್ ಬಳಿ ರೂಂನ ಕೀ ಪಡೆದಿದ್ದ. ಮಕರಂದ್ ಹಾಗೂ ರಾಜ್‌ಶಾ ಹೊರಹೋಗಿ ಸ್ವಲ್ಪ ಹೊತ್ತಿನ ಬಳಿಕ ಹಿಂದಿರುಗಿದಾಗ ರೂಂನಲ್ಲಿದ್ದ ಲ್ಯಾಪ್‌ಟಾಪ್​ಗಳು ಇರಲಿಲ್ಲ. ಜತೆಗೆ ಅಪರಿಚಿತ ವ್ಯಕ್ತಿಯೂ ಇರಲಿಲ್ಲ. ಈ ಬಗ್ಗೆ ಪಿಜಿ ಮಾಲೀಕರನ್ನು ವಿಚಾರಿಸಿದಾಗ ಯಾರೂ ಹೊಸದಾಗಿ ಪಿಜಿಗೆ ಸೇರಿಲ್ಲ ಎಂದಿದ್ದಾರೆ. ಆಗ ಕಳ್ಳನ ಕರಾಮತ್ತು ಬೆಳಕಿಗೆ ಬಂದಿದೆ. ಬೆಳಗಾವಿ ಮೂಲದ ಮಕರಂದ್ ಎಂಬುವರು ಈ ಬಗ್ಗೆ ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಬಲೆ ಬೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments