Webdunia - Bharat's app for daily news and videos

Install App

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

Krishnaveni K
ಗುರುವಾರ, 10 ಜುಲೈ 2025 (15:11 IST)
ಬೆಂಗಳೂರು: ಬಿಜೆಪಿ, ಸಂವಿಧಾನ ಮತ್ತು ಸಂವಿಧಾನಕರ್ತೃ ಡಾ. ಅಂಬೇಡ್ಕರರಿಗೆ ಗರಿಷ್ಠ ಗೌರವ ನೀಡಿದ್ದರೆ, ಸಂವಿಧಾನಕ್ಕೆ ಇಡೀ ದೇಶದಲ್ಲಿ ಅಪಚಾರ ಮಾಡಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಎಂದು ಇಡೀ ದೇಶವೇ ಹೇಳುತ್ತದೆ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಎಸ್.ಸಿ. ಮತ್ತು ಎಸ್.ಟಿ. ಮೋರ್ಚಾ ವತಿಯಿಂದ ಸಂವಿಧಾನ ಸನ್ಮಾನ ಅಭಿಯಾನದ ಅಂಗವಾಗಿ ‘ಮನೆ-ಮನಕ್ಕೆ ಸಂವಿಧಾನ, ಹರ್-ಘರ್ ಸಂವಿಧಾನ’ ಪರಿಕಲ್ಪನೆಯ ಚಿತ್ರ ಶೀರ್ಷಿಕೆ ಗೀತೆಯನ್ನು ಇಂದು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
 
ಬಿಜೆಪಿಯು ಸಂವಿಧಾನಕ್ಕೆ ಮತ್ತು ಬಾಬಾ ಸಾಹೇಬ ಡಾ. ಅಂಬೇಡ್ಕರ್ ಅವರಿಗೆ ಎಲ್ಲ ರೀತಿಯಲ್ಲಿ ಗೌರವ ಕೊಟ್ಟಿದೆ. ಡಾ. ಅಂಬೇಡ್ಕರರು ಹುಟ್ಟಿದ ದಿನದಿಂದ ಅವರ ಅಂತ್ಯವಾಗುವವರೆಗಿನ ಪ್ರಮುಖ ಸ್ಥಳಗಳನ್ನು ಗುರುತಿಸಿ, ಅಂತರಾಷ್ಟ್ರೀಯ ಸ್ಮಾರಕಗಳನ್ನು ನಿರ್ಮಿಸಿ ಅವರನ್ನು ಗೌರವಿಸುವ ಕೆಲಸ ಬಿಜೆಪಿ ಮಾಡಿದೆ. ಸಂವಿಧಾನಕ್ಕೆ ಬಿಜೆಪಿ ಎಲ್ಲಿಯೂ ಅಪಮಾನ ಮಾಡಿಲ್ಲ ಎಂದು ವಿವರಿಸಿದರು.
1975 ರಲ್ಲಿ ಕಾಂಗ್ರೆಸ್ ಪಕ್ಷ ತುರ್ತು ಪರಿಸ್ಥಿತಿ ಹೇರಿ ನಮ್ಮ ಸಂವಿಧಾನವನ್ನು ಕೊಲೆ ಮಾಡಿತ್ತು. ಆದರೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈಗ ಸಂವಿಧಾನ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಏಕೆ ಈ ಪರಿಸ್ಥಿತಿ ಅವÀರಿಗೆ ಬಂದಿದೆ ಎಂದರೆ ಇಂದಿರಾ ಗಾಂಧಿ ಅವರು ಕೊಲೆ ಮಾಡಿದ ಸಂವಿಧಾನ ಇದೇ ನೋಡಿ ಎಂದು ತೋರಿಸುತ್ತಿದ್ದಾರೆ ಎಂದು ಟೀಕಿಸಿದರು. 
 
ರಾಹುಲ್ ಗಾಂಧಿಯವರು ಹಿಂದುತ್ವವನ್ನು ಬೈಯುತ್ತಾರೆ, ದೇವರನ್ನು ನಂಬುವುದಿಲ್ಲವೆಂದು ಹೇಳುತ್ತಾರೆ. ಆದರೆ ಮುಸಲ್ಮಾನರ ದರ್ಗಾಗಳಲ್ಲಿ ಮತ್ತು ಕ್ರೈಸ್ತರ ಚರ್ಚುಗಳಿಗೆ ಹೋಗಿ ಪ್ರಾರ್ಥಿಸುತ್ತಾರೆ. ಆಗ ಬಿಜೆಪಿ ಕಾರ್ಯಕರ್ತರು ಅವರನ್ನು ಟೀಕಿಸಿದರೆ ಆ  ಸಂದರ್ಭದಲ್ಲಿ ಹೋಗಿ ತಿಲಕವನ್ನು ಹಣೆಗೆ ಇಟ್ಟು ನಾವು ಹಿಂದು ಎಂದು ಹೇಳುತ್ತಾರೆ ಎಂದು ಆಕ್ಷೇಪಿಸಿದರು.
 
ಅವರಲ್ಲಿ ಪಾಪಪ್ರಜ್ಞೆ ಕಾಡುತ್ತಿದೆ
ಕಾಂಗ್ರೆಸ್ಸಿಗರು ಮೊದಲಿನಿಂದ ಸಂವಿಧಾನವನ್ನು ಗೌರವಿಸಿದ್ದರೆ ಇಂದು ರಾಹುಲ್ ಗಾಂಧಿಯವರು ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಅವರಿಗೆ ಬರುತ್ತಿರಲಿಲ್ಲ ಎಂದು ತಿಳಿಸಿದರು. ಇಂದು ಏಕೆ ಸಂವಿಧಾನಕ್ಕೆ ಗೌರವ ಕೊಡುತ್ತಿದ್ದಾರೆ ಎಂದರೆ ಅವರಿಗೆ ಪಾಪಪ್ರಜ್ಞೆ ಕಾಡುತ್ತಿದೆ. ಸಂವಿಧಾನಕ್ಕೆ ನಾವು ದ್ರೋಹ ಮಾಡಿದ್ದೇವೆ. ಆದ್ದರಿಂದ ಪ್ರಸ್ತುತ ಅದನ್ನು ಮರೆಮಾಚುವ ಸಲುವಾಗಿ ಸಂವಿಧಾನದ ಪುಸ್ತಕವನ್ನು ರಾಹುಲ್ ಗಾಂಧಿ ಅವರು ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments