Webdunia - Bharat's app for daily news and videos

Install App

ಧಾರವಾಡದಲ್ಲಿ ಹಿಂದೂ ರುದ್ರಭೂಮಿ ವಕ್ಫ್ ಆಸ್ತಿಯಾಗಿದೆ: ಛಲವಾದಿ ನಾರಾಯಣಸ್ವಾಮಿ

Krishnaveni K
ಗುರುವಾರ, 5 ಡಿಸೆಂಬರ್ 2024 (15:19 IST)
ದಾವಣಗೆರೆ: ವಕ್ಫ್ ಸಮಸ್ಯೆ, ಭೂಮಿ ಕಬ್ಜಾ ಮಾಡುವುದನ್ನು ಗಮನಿಸಿ ಬಿಜೆಪಿ 3 ತಂಡಗಳಲ್ಲಿ ಪ್ರವಾಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ದಾವಣಗೆರೆಯಲ್ಲಿ ಇಂದು ಸುದ್ದಿಗೋಷ್ಠ್ಟಿಯಲ್ಲಿ ಮಾತನಾಡಿದ ಅವರು, ವಕ್ಫ್ ನೋಟಿಸಿನಿಂದ ತೊಂದರೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತಿದೆ. 3 ತಂಡಗಳು ಸಂಗ್ರಹಿಸಿದ ಮಾಹಿತಿಯನ್ನು ಜಂಟಿ ಸಂಸದೀಯ ಸಮಿತಿ ಮತ್ತು ರಾಜ್ಯ ಸರಕಾರಕ್ಕೆ ಸಲ್ಲಿಸಿ ರೈತರು, ಮಠಮಾನ್ಯಗಳಿಗೆ ಅನ್ಯಾಯ ಆಗದಂತೆ ತಡೆಯುವ ಉದ್ದೇಶ ಪಕ್ಷದ್ದು ಎಂದು ವಿವರಿಸಿದರು.

ಧಾರವಾಡ ಜಿಲ್ಲೆ ಮಿಸ್ರಿಕೋಟೆಯಲ್ಲಿ ಹಿಂದೂ ರುದ್ರಭೂಮಿಯನ್ನು ವಕ್ಫ್ ಆಸ್ತಿ ಎಂದು ತಿಳಿಸಿದ್ದಾರೆ. ಶಾಲೆಗಳು, ಸಹಕಾರ ಸೊಸೈಟಿ ಜಾಗ, ಅಂಬೇಡ್ಕರರ ವಿಗ್ರಹ ಇರುವ ಜಾಗವನ್ನೂ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿದ್ದಾರೆ ಎಂದು ಆಕ್ಷೇಪಿಸಿದರು.

ಹಾವೇರಿ ಜಿಲ್ಲೆಯಲ್ಲೂ ರೈತರ ಅಹವಾಲು ಸ್ವೀಕರಿಸಿದ್ದೇವೆ ಎಂದ ಅವರು ಹರಿಹರ ತಾಲ್ಲೂಕಿನ ಬಾನುವಳ್ಳಿಯಲ್ಲಿ ರುದ್ರಭೂಮಿಗೆ ಕೊಟ್ಟ 4 ಎಕರೆಗೂ ಹೆಚ್ಚು ಜಾಗವನ್ನು ಪಹಣಿಯಲ್ಲಿ ಖಬರಸ್ಥಾನ ಎಂದು ತಿಳಿಸಿದ್ದಾರೆ ಎಂದು ಟೀಕಿಸಿದರು. ದರ್ಗಾ, ಮಸೀದಿ ಜಾಗ ಕಾಪಾಡಲು ವಕ್ಫ್ ಇರುವುದು. ಇಲ್ಲಿ ದರ್ಗಾ, ಮಸೀದಿಯವರು ಪತ್ರ ಬರೆದು ವಕ್ಫ್‍ಗೆ ಸೇರಿದೆ ಎಂದು ತಿಳಿಸಿದೊಡನೆ ಅದನ್ನು ವಕ್ಫ್ ಆಸ್ತಿ ಎಂದು ಕಾಲಂ 11ರಲ್ಲಿ ಬರೆಯಲಾಗುತ್ತಿದೆ ಎಂದು ಆರೋಪಿಸಿದರು.

ಸಿಎಂ ಆದೇಶದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಬರಸ್ಥಾನ, ಮಸೀದಿ ಜಾಗಮ ರೈತರು, ಮಠಮಾನ್ಯಗಳ ಜಾಗ ವಕ್ಫ್ ಆಗಿದ್ದರೆ ಕಾಂಪೌಂಡ್ ಹಾಕಲು ಜಿಲ್ಲಾ ಅದಾಲತ್ ಮಾಡುತ್ತಿದ್ದಾರೆ ಎಂದು ಅವರು ಖಂಡಿಸಿದರು. ವಕ್ಫ್ ಹೆಸರಿನಲ್ಲಿ ರೈತರ, ಮಠಗಳ ಭೂಮಿ ಕಬಳಿಸುವ ನೀತಿಯನ್ನು ತೀವ್ರವಾಗಿ ಖಂಡಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಪ್ರೀತಿಯ ಅಜ್ಜಿ ಎಂಬ ಬಿರುದು ಪಡೆದಿದ್ದ ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

ಒಂದೇ ವರ್ಷದಲ್ಲಿ ಬರೋಬ್ಬರಿ 52 ಕೋಟಿ ಸಸಿ ನೆಡುವ ನಿರ್ಧಾರ ಕೈಗೊಂಡ ಯೋಗಿ ಸರ್ಕಾರ

ದೆಹಲಿಯಲ್ಲಿ ಒಂದೇ ಕಾರಿನಲ್ಲಿ ಸಿಎಂ, ಡಿಸಿಎಂ ಸುತ್ತಾಟ

ಮುಂದಿನ ಸುದ್ದಿ
Show comments