Webdunia - Bharat's app for daily news and videos

Install App

ಯಾರಿಗೆ ದೂರು ಕೊಟ್ರೂ ಕ್ರಮವೇ ತಗೊಳ್ಳಲ್ಲ: ಛಲವಾದಿ ನಾರಾಯಣಸ್ವಾಮಿ ಅಳಲು

Krishnaveni K
ಗುರುವಾರ, 29 ಮೇ 2025 (17:23 IST)
ಬೆಂಗಳೂರು: ಚಿತ್ತಾಪುರದಲ್ಲಿ ನನ್ನ ದಿಗ್ಬಂಧನ, ಅಹಿತಕರ ಘಟನೆಗಳ ಕುರಿತು ಡಿ.ಜಿ, ಗೃಹ ಸಚಿವ, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟಿದ್ದೇವೆ. ಇದುವರೆಗೂ ಏನೂ ಕ್ರಮ ಜರುಗಿಸಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ.
 
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿತ್ತಾಪುರದಲ್ಲಿ 5 ಗಂಟೆ ನನ್ನನ್ನು ಕೂಡಿ ಹಾಕಿದ್ದರು. ನಮ್ಮ ಜನರು ಬರದಂತೆ ತಡೆದರು. ನನ್ನ ಕಾರಿನ ಮೇಲೆ ಮಸಿ ಸುರಿದರು. ಕಲ್ಲುಗಳನ್ನು ಜಮಾಯಿಸಿ ಇಟ್ಟಿದ್ದರು. ಮೊಟ್ಟೆ ತೂರಲು, ಕಲ್ಲು ತೂರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು ಎಂದು ಗಮನಕ್ಕೆ ತಂದರು. ನಾನು ಅಲ್ಲಿಂದಲೇ ಗೃಹ ಸಚಿವರು, ಎಡಿಜಿಪಿಗೆ ಕರೆ ಮಾಡಿ ಮಾತನಾಡಿದೆ. ಸುಮಾರು 10 ಸಾರಿ ಎಸ್ಪಿಗೆ ಮಾತನಾಡಿದ್ದೆ ಎಂದು ವಿವರಿಸಿದರು.

ಅಡಿಷನಲ್ ಎಸ್ಪಿ ಬಂದವರು 5 ತಾಸು ನಮ್ಮ ಜೊತೆಗಿದ್ದರು. ಆದರೆ, ನನ್ನನ್ನು ನಿಂದಿಸುವವರ ವಿರುದ್ಧ ಕ್ರಮ ಕೈಗೊಂಡಿಲ್ಲ; ಕೇಳಿದರೆ ‘ಸಾರ್ ಅರ್ಥ ಮಾಡ್ಕೊಳ್ಳಿ; ನಮಗೆ ಒತ್ತಡ ಇದೆ’ ಎನ್ನುತ್ತಿದ್ದರು. 5 ಗಂಟೆ ಬಳಿಕ ಚಿತ್ತಾಪುರದಿಂದ ಹೊರಗೆ ಹಾಕಿದರು. ನಾನು ಯಾದಗಿರಿಗೆ ಬಂದೆ. ಕಾರ್ಯಕ್ರಮಗಳನ್ನು ರದ್ದುಪಡಿಸಿ ರಾತ್ರೋರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ಬಂದೆ ಎಂದು ಹೇಳಿದರು. ಬಳಿಕ ಗುಲ್ಬರ್ಗದಲ್ಲಿ ಗುಲ್ಬರ್ಗ ಚಲೋ ಪ್ರತಿಭಟನೆ ನಡೆದುದನ್ನೂ ಪ್ರಸ್ತಾಪಿಸಿದರು.

ಚಿತ್ತಾಪುರಕ್ಕೆ ನನ್ನನ್ನು ನೋಡಲು ಬಂದಿದ್ದ ನಮ್ಮ ಪಕ್ಷದ ಮುಖಂಡ ಅಂಬಾರಾಯ ಅಷ್ಟಗಿಯವವರ ಮೇಲೆ ಹಲ್ಲೆ ಮಾಡಿದ್ದಾರೆ. ಬಟ್ಟೆ ಹರಿದು ಬಿಸಾಡಿದ್ದರು. ಅವರ ಮೇಲೇ ದೂರು ಕೊಡಿಸಿ ತಹಸೀಲ್ ಕಚೇರಿಯಲ್ಲಿ ಕೂಡಿ ಹಾಕಿದ್ದರು. ಇದಕ್ಕಾಗಿಯೇ ನಾವು ರಿಪಬ್ಲಿಕ್ ಆಫ್ ಗುಲ್ಬರ್ಗ ಎಂದಿದ್ದಾಗಿ ಹೇಳಿದರು.
 
ನಮ್ಮ ಸರಕಾರ ಇದ್ದಾಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು ಕೊಡಗಿಗೆ ಭೇಟಿ ಕೊಟ್ಟಿದ್ದರು. ಮೊಟ್ಟೆ ಎಸೆದರೆಂದು ದೊಡ್ಡ ರಾದ್ಧಾಂತ ಮಾಡಿದ್ದರು. ನಾವು ಅವರಿಗೆ ಎಷ್ಟು ರಕ್ಷಣೆ ಕೊಟ್ಟಿದ್ದೆವು ಎಂದು ಗಮನ ಸೆಳೆದರು. 
 
ಪ್ರಶಸ್ತಿ ಋಣ ತೀರಿಸಲು ದೂರು
ದತ್ತಾತ್ರೇಯ ಶಾಂತಪ್ಪ ಇಕ್ಕಲಗಿ ಎಂಬವರು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ರವಿಕುಮಾರರ ವಿರುದ್ಧ ದೂರು ನೀಡಿದ್ದಾರೆ. ಅವರು ಸಮಾಜಸೇವಕ. ಅವರಿಗೆ ಕಾಂಗ್ರೆಸ್ ಸರಕಾರವು ಈಚೆಗೆ ಅಂಬೇಡ್ಕರರ ಪ್ರಶಸ್ತಿ ಕೊಟ್ಟಿದೆ. ಪ್ರಶಸ್ತಿ ಋಣ ತೀರಿಸಲು ಅವರು ದೂರು ಕೊಟ್ಟಿದ್ದಾರೆ ಎಂದು ಆರೋಪಿಸಿದರು. ದತ್ತಾತ್ರೇಯರನ್ನು ಯಾರಾದರೂ ಬೈದರೇ? ರವಿಕುಮಾರರಿಗೆ ಪೊಲೀಸ್ ನೋಟಿಸ್ ಕೊಡುತ್ತೀರಾ? ಈ ಸರಕಾರದಲ್ಲಿ ಏನು ನಡೆದಿದೆ ಎಂದು ಕೇಳಿದರು.

ಡಿ.ಸಿ, ಖರ್ಗೆಯವರು, ಅಧಿಕಾರಿಗಳನ್ನು ರವಿಕುಮಾರ್ ಅವರು ಬೈದಿದ್ದಾರೆ. ಅದಕ್ಕಾಗಿ ದೌರ್ಜನ್ಯ ಕಾಯ್ದೆಯಡಿ ಹೊಲೆಯ ಪದ ಬಳಸಿದ್ದಾಗಿ ಆಕ್ಷೇಪಿಸಿ ದೂರು ಕೊಟ್ಟಿದ್ದಾರೆ ಎಂದು ಟೀಕಿಸಿದರು. ನಾನು ಕೂಡ ಎಸ್.ಸಿ. ಸಮುದಾಯಕ್ಕೆ ಸೇರಿದವ. ಡಿ.ಸಿ.ಯವರನ್ನು ಪಾಕಿಸ್ತಾನದವರು ಎಂದರಲ್ಲ. ಇದು ಅಟ್ರಾಸಿಟಿ ಕೇಸಿಗೆ ಕಾರಣವಾಗುತ್ತದೆಯೇ ಎಂದು ಪ್ರಶ್ನಿಸಿದರು. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರು ಎನ್ನುವುದು ಅಟ್ರಾಸಿಟಿ ಆಗುವುದೇ ಎಂದು ಕೇಳಿದರು.

ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಹೊಲೆಯ, ದಲಿತ ಎಂಬ ಪದಗಳನ್ನು ತಮ್ಮ ಭಾಷಣದ ವೇಳೆ ಬಳಸಿದ್ದರೆ ನಾನೇ ಅವರ ಮೇಲೆ ದೂರು ನೀಡುತ್ತೇನೆ ಎಂದು ಸವಾಲೆಸೆದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments