Webdunia - Bharat's app for daily news and videos

Install App

ಭಿನ್ನಮತನೂ ಇಲ್ಲಾ ನಮ್ಮಲ್ಲಿ ಏನೂ ಇಲ್ಲ, ಎಲ್ಲವೂ ಆಲ್ ರೈಟ್: ಛಲವಾದಿ ನಾರಾಯಣಸ್ವಾಮಿ

Krishnaveni K
ಶನಿವಾರ, 4 ಜನವರಿ 2025 (09:48 IST)
ಬೆಂಗಳೂರು: ರಾಜ್ಯದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದ್ದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.
 
ನಗರದ ಕುಮಾರಕೃಪ ವಸತಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಡ್ಡಾಜೀ ಅವರು ಒಂದು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು. ನಾವು ಸಹಜವಾಗಿಯೇ ಮಾತುಕತೆ ನಡೆಸಿದ್ದೇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ ಎಂದು ವಿವರ ನೀಡಿದರು.
 
ಸಂಘಟನೆಯ ಬಗ್ಗೆ ಕೇಳಿದ್ದು, ಎಲ್ಲವನ್ನೂ ಹೇಳಿದ್ದೇವೆ. ವಿರೋಧ ಪಕ್ಷ ನಾಯಕರಾಗಿ ಹೇಗೆ ಕೆಲಸ ಮಾಡ್ತಿದ್ದೀರಿ ಎಂದು ಕೇಳಿದ್ದು, ನಾವು ಮಾಡಿರುವ ಕೆಲಸಗಳ ಬಗ್ಗೆ, ಎಲ್ಲಾ ಒಟ್ಟಾಗಿ ಕೆಲಸ ಮಾಡ್ತಿದ್ದೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು.

ನಾನು, ವಿಪಕ್ಷ ನಾಯಕ ಆರ್.ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಎನ್. ರವಿಕುಮಾರ್, ಲೇಹರ್ ಸಿಂಗ್, ತೇಜಸ್ವಿಸೂರ್ಯ, ಎನ್. ಮುನಿರತ್ನ, ಸಿದ್ದು ಪಾಟೀಲ್ ಸೇರಿದಂತೆ ಅನೇಕ ನಾಯಕರು ಭೇಟಿ ಮಾಡಿದ್ದೇವೆ. ಪ್ರತ್ಯೇಕವಾಗಿ ಕರೆದು ಮಾತನಾಡಿದ್ದಾರೆ; ಪಕ್ಷ ಸಂಘಟನೆ ಹೇಗೆ ನಡೆಯುತ್ತಿದೆ ಎಂಬ ವಿಷಯವನ್ನೂ ಚರ್ಚೆ ಮಾಡಿದ್ದೇವೆ; ಸರ್ಕಾರದ ಕಾರ್ಯವೈಖರಿ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇವೆ ಎಂದು ತಿಳಿಸಿದರು.

ಭಿನ್ನರು ಇಂದು ಜೆ.ಪಿ ನಡ್ಡಾಜೀ ಅವರನ್ನು ಭೇಟಿ ಮಾಡಿಲ್ಲ ಅಂದರೆ ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಅಂತ ಅರ್ಥ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಭಿನ್ನಮತ ಇದ್ದರೆ ಅವರು ಜೆ.ಪಿ ನಡ್ಡಾ ಅವರನ್ನು ಭೇಟಿ ಆಗುತ್ತಿದ್ದರು ಎಂದು ನುಡಿದರು.
 
ಮುಡಾ, ವಾಲ್ಮೀಕಿ ನಿಗಮ, ಸಚಿನ್ ಆತ್ಮಹತ್ಯೆ ಕೇಸ್ ಬಗ್ಗೆಯೂ ಹೋರಾಟ ಮಾಡುತ್ತೇವೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments