Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಹಿಂದೂ ಸ್ವಾಮೀಜಿಗಳನ್ನು ಕಂಡ್ರೆ ಆಗಲ್ಲ: ಛಲವಾದಿ ನಾರಾಯಣ ಸ್ವಾಮಿ

Krishnaveni K
ಸೋಮವಾರ, 2 ಡಿಸೆಂಬರ್ 2024 (15:23 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವವರನ್ನು ಪಕ್ಕಕ್ಕೇ ಇಟ್ಟುಕೊಳ್ಳುತ್ತದೆ, ಆದರೆ ಇವರಿಗೆ ಹಿಂದೂ ಸ್ವಾಮೀಜಿಗಳನ್ನು ಕಂಡರೆ ಆಗಲ್ಲ ಎಂದು ವಿಧಾನಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗಷ್ಟೇ ವಕ್ಫ್ ವಿರುದ್ಧ ಹೋರಾಟ ಸಮಾವೇಶದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ಈ ದೇಶದಲ್ಲಿ ಮುಸ್ಲಿಮರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ಈ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ‘ಸ್ವಾಮೀಜಿಗಳು ವಕ್ಫ್ ವಿರುದ್ಧ ಹೋರಾಟದಲ್ಲಿ ಹೇಳಿಕೆ ನೀಡುವಾಗ ಮುಸ್ಲಿಮರ ಬಗ್ಗೆ ಅಂತಹದ್ದೊಂದು ಹೇಳಿಕೆ ನೀಡಿರುವುದು ನಿಜ. ಆದರೆ ಅದಕ್ಕೆ ಅವರು ಕ್ಷಮೆ ಕೇಳಿದ್ದೂ ಆಗಿದೆ. ಹಾಗಿದ್ದರೂ ಅವರ ಮೇಲೆ ಎಫ್ಐಆರ್ ಹಾಕಿ ವಿಚಾರಣೆ ನೆಪದಲ್ಲಿ ಠಾಣೆಗೆ ಕರೆಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ. ಇದೇ ಕಾಂಗ್ರೆಸ್ ಸರ್ಕಾರ ಈ ಹಿಂದೆ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದವರನ್ನು ತಮ್ಮ ಪಕ್ಕವೇ ಇಟ್ಟುಕೊಂಡಿತ್ತು. ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಹಿಂದೂ ಸ್ವಾಮೀಜಿಗಳ ಮೇಲೆ ಕ್ಷಮೆ ಕೇಳಿದ ಮೇಲೂ ಕೇಸ್ ಹಾಕಿದೆ.

ಕಾಂಗ್ರೆಸ್ ಹಿಂದೂ ವಿರೋಧಿ ಧೋರಣೆ ಇದರಲ್ಲೇ ಮತ್ತೊಮ್ಮೆ ಸಾಬೀತಾಗಿದೆ. ಈ ಸರ್ಕಾರಕ್ಕೆ ಹಿಂದೂ ಸ್ವಾಮೀಜಿಗಳನ್ನು ಕಂಡರೆ ಆಗಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿವೈ ವಿಜಯೇಂದ್ರ, ಡಾ ಸಿಎನ್ ಅಶ್ವತ್ಥ ನಾರಾಯಣ ಸೇರಿದಂತೆ ಬಿಜೆಪಿ ನಾಯಕರ ನಿಯೋಗ ಇಂದು ಸ್ವಾಮೀಜಿಗಳನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments